More

    ಉಚಿತ ಕನ್ನಡಕ ವಿತರಣೆ


    ಚಾಮರಾಜನಗರ: ಹನೂರು ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಣ್ಣಿನ ತಪಾಸಣೆಗೊಳಗಾದವರಿಗೆ ಶಾಸಕ ಎಂ.ಆರ್. ಮಂಜುನಾಥ್ ಶನಿವಾರ ಉಚಿತ ಕನ್ನಡಕ ವಿತರಿಸಿದರು.


    ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಯಿಂದ ಮನೆ ಮನೆಗೆ ತೆರಳಿ ಕಣ್ಣಿನ ಪರೀಕ್ಷೆ ನಡೆಸಲಾಗುವುದು. ಜನ ಸಾಮಾನ್ಯರಲ್ಲಿ ಕಣ್ಣಿನ ಆರೋಗ್ಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸರ್ಕಾರ ಆಶಾಕಿರಣ ಮಹತ್ವಾಕಾಂಕ್ಷಿ ಯೋಜನೆ ಜಾರಿಗೊಳಿಸಿದೆ.

    ಈ ದೆಸೆಯಲ್ಲಿ ತಾಲೂಕಿನಲ್ಲಿ ಮಕ್ಕಳು ಹಾಗೂ ಹಿರಿಯ ನಾಗರಿಕರು ಸೇರಿದಂತೆ 415 ಜನರು ಕಣ್ಣಿನ ಸಮಸ್ಯೆ ಎದುರಿಸುತ್ತಿರುವುದು ಗಮನಕ್ಕೆ ಬಂದಿದ್ದು, ಇದೀಗ ಸಾಂಕೇತಿಕವಾಗಿ 20 ಜನರಿಗೆ ಉಚಿತವಾಗಿ ಕನ್ನಡಕ ವಿತರಿಸಲಾಗುತ್ತಿದೆ. ಆದ್ದರಿಂದ ದೋಷವುಳ್ಳವರು ಇದನ್ನು ಬಳಕೆ ಮಾಡಿಕೊಳ್ಳುವುದರ ಮೂಲಕ ಕಣ್ಣಿನ ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದರು.

    ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಕಾಶ್, ವೈದ್ಯಾಧಿಕಾರಿ ಡಾ. ಪುಷ್ಪಾರಾಣಿ ಹಾಗೂ ಆಸ್ಪತ್ರೆಯ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts