More

    ಶೃಂಗೇರಿ, ಮಲ್ಲಂದೂರು ಅತ್ಯಾಚಾರ ಆರೋಪಿಗಳನ್ನು ಶೀಘ್ರ ಬಂಧಿಸಿ

    ಚಿಕ್ಕಮಗಳೂರು: ಶೃಂಗೇರಿಯ ಅಪ್ರಾಪ್ತೆಯ ಮೇಲೆ ಹಾಗೂ ಮಲ್ಲಂದೂರು ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ, ಸಂವಿಧಾನ ಸಂರಕ್ಷಣಾ ಸಮಿತಿ ಮತ್ತು ವಿಶ್ವರತ್ನ ಅಂಬೇಡ್ಕರ್ ಯುವಸೇನೆ ಕಾರ್ಯಕರ್ತರು ನಗರದ ಆಜಾದ್ ವೃತ್ತದಲ್ಲಿ ಸೋಮವಾರ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.

    ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ಮಾತನಾಡಿ, ಜಿಲ್ಲೆ ಹಲವು ಸಾಧನೆಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ವಿಕೃತಕಾಮಿಗಳು ಅಮಾನವೀಯವಾಗಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿರುವುದು ಹೀನಕೃತ್ಯ. ತಪ್ಪಿತಸ್ಥರನ್ನು ಗಲ್ಲಿಗೇರಿಸಿದರೆ ಇಡೀ ನಾಡಿಗೆ ಸಂದೇಶ ರವಾನೆ ಆದಂತಾಗುತ್ತದೆ. ಆವತಿ ಗ್ರಾಮದಲ್ಲಿ ದಲಿತ ಯುವತಿ ಮೇಲೆ ಅತ್ಯಾಚಾರವೆಸಗಿ ವಂಚಿಸಿರುವ ಆರೋಪಿಗಳನ್ನೂ ಬಂಧಿಸಬೇಕು ಎಂದು ಆಗ್ರಹಿಸಿದರು.

    ಹೆಣ್ಣುಮಕ್ಕಳ ಬಗ್ಗೆ ಸಮಾಜದಲ್ಲಿ ಗೌರವದ ಭಾವನೆಯಿದೆ. ಅದನ್ನು ಕಾಪಾಡುವ ನಿಟ್ಟಿನಲ್ಲಿ ಕನ್ನಡಪರ ಸಂಘಟನೆಗಳು ಹೋರಾಡುತ್ತಾ ಬಂದಿದೆ. ಜಿಲ್ಲಾಡಳಿತ ಯಾರ ಒತ್ತಡಕ್ಕೂ ಮಣಿಯದೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕು ಎಂದು ಒತ್ತಾಯಿಸಿದರು.

    ಕರವೇ ಯುವ ಘಟಕದ ಅಧ್ಯಕ್ಷ ಕುಮಾರ್, ನಾಗಲತಾ, ಚೈತ್ರಾ, ಪುಷ್ಪಾ ಲಿಂಗದಹಳ್ಳಿ, ಸುಧಾ, ಪೂರ್ಣಿಮಾ, ಜಯಮ್ಮ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts