ಜಯಪುರ: ಮಳೆಯಿಂದ ಹಾನಿಯಾದ ಪ್ರದೇಶಗಳಲ್ಲಿ ತಾತ್ಕಾಲಿಕ ಹಾಗೂ ಶಾಶ್ವತ ಕಾಮಗಾರಿ ನಡೆಸಲು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹೇಳಿದರು.
ಮಂಗಳವಾರ ಮೇಗುಂದಾ ಹೋಬಳಿಯಲ್ಲಿ ಮಳೆಯಿಂದ ಹಾನಿಯಾದ ಶುಂಠಿಕುಡಿಗೆ, ಹುತ್ತಿನಗದ್ದೆ ರಸ್ತೆ, ಜಲದುರ್ಗ ಸಮೀಪದ ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿ ಮತ್ತು ಕೂಳೂರು-ನೈಬಿ ಸಂಪರ್ಕ ರಸ್ತೆಯಲ್ಲಿ ಹಾನಿಯಾದ ಸೇತುವೆ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿ, 2019ರಲ್ಲಿ ಹಾನಿಯಾದ ಮೇಗುಂದಾ ಹೋಬಳಿ ವ್ಯಾಪ್ತಿಯ ಫಲಾನುಭವಿಗಳ ವಿವರ ನೀಡಿದರೆ ಕೂಡಲೇ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳುತ್ತೇನೆ ಎಂದರು.
ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮಾತನಾಡಿ, 2ನೇ ಕಂತಿನ ಹಣ ಬಿಡುಗಡೆಯಾಗಿದ್ದು ಮನೆ ನಿರ್ವಣವಾಗಿಯೂ ಹಣ ಬಿಡುಗಡೆಯಾಗದಿದ್ದರೆ ಕೂಡಲೇ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.