ಕೊಪ್ಪಳ: ನಗರದ ಜಿಲ್ಲಾ ಬೋಧಕ ಸ್ಪತ್ರೆಗೆ ಸೋಮವಾರ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ನಲಿನ್ ಅತುಲ್ ಪರಿಶೀಲನೆ ನಡೆಸಿದರು.
ವಾರ್ಡ್ಗಳಿಗೆ ತೆರಳಿ ರೋಗಿಗಳ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯಲ್ಲಿ ಸಿಗುತ್ತಿರುವ ಸೇವೆ, ಚಿಕಿತ್ಸೆ ಸರಿಯಾಗಿದೆಯೇ ಎಂದು ಕೇಳಿ ಮಾಹಿತಿ ಪಡೆದುಕೊಂಡರು. ಸಾಮಾನ್ಯ ವಾರ್ಡ್ಗಳನ್ನು ವೀಸಿದ ಬಳಿಕ ಔಷಧ ಉಗ್ರಾಣಕ್ಕೆ ತೆರಳಿ ದಾಸ್ತಾನು ವಿವರ ಪಡೆದರು. ಆಸ್ಪತ್ರೆಯಲ್ಲಿ ಲಭ್ಯ ಇರುವ ಚಿಕಿತ್ಸೆಯನ್ನು ಸಮರ್ಪಕವಾಗಿ ನೀಡಿ. ರೋಗಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ. ಅಗತ್ಯ ಮೂಲ ಸೌಕರ್ಯ ಒದಗಿಸಿ ಎಂದು ವೈದ್ಯಾಧಿಕಾರಿಗಳಿಗೆ ತಾಕೀತು ಮಾಡಿದರು.
ಕಿಮ್ಸ್ ನಿರ್ದೇಶಕ ಡಾ.ವಿಜಯನಾಥ ಇಟಗಿ, ವೈದ್ಯಕಿಯ ಅಧೀಕ್ಷಕ ಡಾ.ವೇಣುಗೋಪಾಲ ಹಾಗೂ ಇತರ ವೈದ್ಯಾಧಿಕಾರಿಗಳು ಇದ್ದರು.