ಕೊಪ್ಪಳ: ಕನ್ನಡ ಸೇರಿ ಇತರ ಭಾಷೆ ಓದು-ಬರಹ ಬಾರದ ಪ್ರಭು ಲೋಕರೆ ಎಂಬಾತ ಯಾದಗಿರಿ ನ್ಯಾಯಾಲಯದಲ್ಲಿ ಪ್ಯೂನ್ ಆಗಿ ನೇಮಕಗೊಂಡಿದ್ದು, ಆತನ ವಿರದ್ಧ ನಗರಠಾಣೆಯಲ್ಲಿ ಪಕ್ರರಣ ದಾಖಲಾಗಿದೆ.
ಏಳನೇ ತರಗತಿ ವಿದ್ಯಾರ್ಹತೆ ಮೇಲೆ ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಸ್ಕಾವೆಂಜರ್ ಆಗಿದ್ದ ಪ್ರಭು, ಸದ್ಯ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಜವಾನನಾಗಿ ನೇಮಕವಾಗಿದ್ದಾನೆ. ಬಾಗಲಕೋಟೆಯ ಬನಹಟ್ಟಿಯಲ್ಲಿ ಖಾಸಗಿ ಸಂಸ್ಥೆಯೊಂದರ ಮೂಲಕ ಎಸ್ಸೆಸ್ಸೆಲ್ಸಿ ಪರೀೆ ಬರೆದು 625ಕ್ಕೆ 623 ಅಂಕ ಪಡೆದಿದ್ದಾನೆ. ಈತನಿಗೆ ಓದಲು, ಬರೆಯಲು ಬರದಿದ್ದರೂ ಯಾದಗಿರಿ ನ್ಯಾಯಾಲಯದಲ್ಲಿ ಏ.22ರಂದು ಪ್ಯೂನ್ ಆಗಿ ನೇಮಕವಾಗಿದ್ದಾನೆ. ಆದರೆ, ಆತ ಸಲ್ಲಿಸಿದ ಶೈಕ್ಷಣಿಕ ದಾಖಲೆ ಹಾಗೂ ಪಡೆದ ಅಂಕಗಳ ಬಗ್ಗೆ ಕೊಪ್ಪಳ ಜಿಲ್ಲಾ ನ್ಯಾಯಾಲಯದ ಸಿವಿಲ್ ಮತ್ತು ಜೆಎಂಎ್ಸಿ ನ್ಯಾಯಾಧೀಶರು ಅನುಮಾನ ವ್ಯಕ್ತಪಡಿಸಿದ್ದಾರೆ.
ಆತನಿಗೆ ಸರಿಯಾಗಿ ಇಂಗ್ಲೀಷ್, ಹಿಂದಿ ಭಾಷೆ ಓದು&ಬರಹ ಬರುವುದಿಲ್ಲವೆಂದು ವಿವಿಧ ಮೂಲಗಳಿಂದ ನನ್ನ ಗಮನಕ್ಕೆ ಬಂದಿದೆ. ಹೀಗಾಗಿ ಆತನ ಶೈಕ್ಷಣಿಕ ದಾಖಲೆ ಬಗ್ಗೆ ಶಂಕೆ ಬರುತ್ತಿದೆ. ಇದರಿಂದ ನೈಜ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ. ಇದರ ಹಿಂದೆ ಜಾಲವಿರಬಹುದು. ಈ ಬಗ್ಗೆ ತನಿಖೆ ನಡೆಸುವಂತೆ ನ್ಯಾಯಾಧೀಶರು ನೀಡಿದ ದೂರಿನ ಅನ್ವಯ ಕೊಪ್ಪಳ ನಗರಠಾಣೆಯಲ್ಲಿ ಏ.26ರಂದು ಪ್ರಕರಣ ದಾಖಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರಭು, ತಾನು ದೆಹಲಿ ಮೂಲದ ಸಂಸ್ಥೆ ಮೂಲಕ ನೇರವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದೇನೆ. ನನ್ನಂತೆ ಹಲವರು ಬರೆದಿದ್ದಾರೆ. ನನಗೆ ಓದಲು-ಬರೆಯಲು ಬರುತ್ತದೆ ಎಂದು ತಿಳಿಸಿದ್ದಾನೆ.