More

    ಕಾಂಗ್ರೆಸ್​ನಿಂದ ದಲಿತರಿಗೆ ಅನ್ಯಾಯ:ಹೊರತಟ್ನಾಳ

    ಕೊಪ್ಪಳ: ಕಾಂಗ್ರೆಸ್​ ಪಕ್ಷ ನಿರಂತರವಾಗಿ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ ಹೊರತಟ್ನಾಳ ಆರೋಪಿಸಿದರು.

    ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ನೇತೃತ್ವದ ಸರ್ಕಾರಗಳು ಎಸ್ಸಿ&ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ನಿರಂತರ ಶ್ರಮಿಸಿವೆ. ಮೋದಿ ಪ್ರಧಾನಿಯಾದ ಬಳಿಕ ದೇಶದ ಅಭಿವೃದ್ಧಿಯತ್ತ ಸಾಗುತ್ತಿದೆ. 2047ನೇ ವರ್ಷಕ್ಕೆ ಭಾರತ ಸಮೃದ್ಧ ರಾಷ್ಟ್ರವಾಗಬೇಕು. ದೇಶದ ಕಟ್ಟ ಕಡೆ ವ್ಯಕ್ತಿಗೂ ಅಭಿವೃದ್ಧಿ ಯೋಜನೆಗಳು ತಲುಪಬೇಕು ಎಂದು ಶ್ರಮಿಸುತ್ತಿದ್ದಾರೆ. ಎಸ್ಸಿ&ಎಸ್ಟಿ ಸಮುದಾಯಗಳಿಗೆ ಆರ್ಥಿಕ, ಔದ್ಯೋಗಿಕ, ರಾಜಕೀಯ ಶಕ್ತಿ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದು ಬಿಜೆಪಿ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾದರೂ ಅಭಿವೃದ್ಧಿ ಕೆಲಸ ಮಾಡಿಲ್ಲ. ಬರ ಇದ್ದರೂ ರೈತರಿಗೆ ಸ್ಪಂದಿಸಿಲ್ಲ. ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಲ ನೀಡುತ್ತಿಲ್ಲ. ಜನರಿಗೆ ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಲಭಿಸದು ಎಂಬುದು ಗೊತ್ತಾಗಿದೆ. ಕೇವಲ ಬಾಯಲ್ಲಿ ಅಂಬೇಡ್ಕರ್​ ಹೆಸರು ಹೇಳುತ್ತಾರೆ. ಅಂಬೇಡ್ಕರ್​ ಅವರಿಗೆ ಅನ್ಯಾಯ ಮಾಡಿದ್ದು ಇದೇ ಕಾಂಗ್ರೆಸ್​ ಪಕ್ಷ. ಸಂವಿಧಾನಕ್ಕೆ ಅನೇಕ ತಿದ್ದುಪಡಿ, ತುರ್ತು ಪರಿಸ್ಥಿತಿ ಹೇರಿಕೆ, ಅಂಬೇಡ್ಕರ್​ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಇವರೇ ಎಂಬುದು ಜನತೆಗೆ ಗೊತ್ತಿದೆ. ಜನರು ಚುನಾವಣೆಯಲ್ಲಿ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು. ಜಿಲ್ಲಾ ಮಾಧ್ಯ ಮ ವಕ್ತಾರ ಸೋಮನಗೌಡ, ಮಂಜುನಾಥ ಮುಸಲಾಪುರ, ಅಮಿತ್​ ಕಂಪ್ಲಿಕರ್​ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts