blank

ಕೆಲಸ ಸ್ಥಗಿತಗೊಳಿಸಿ ಹೋರಾಟ

ಕೊಪ್ಪಳ: ಹಾಸ್ಟೆಲ್​ ಗುತ್ತಿಗೆ ನೌಕರರ ಬೇಡಿಕೆ ಈಡೇರಿಸದಿದ್ದಲ್ಲಿ ಜ.31ರಿಂದ ಅಡುಗೆ ಕೆಲಸ ಸ್ಥಗಿತಗೊಳಿಸಿ ಹೋರಾಟ ಮಾಡುವುದಾಗಿ ರಾಜ್ಯ ಹಾಸ್ಟೆಲ್​ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂದ ಜಿಲ್ಲಾಧ್ಯಕ್ಷ ಗ್ಯಾನೇಶ ಕಡಗದ ತಿಳಿಸಿದರು.

ಜಿಲ್ಲೆಯಲ್ಲಿ 1,700ಕ್ಕೂ ಅಧಿಕ ನೌಕರರಿದ್ದೆವೆ. ಹಲವು ದಶಕಗಳಿಂದ ಕೆಲಸ ಮಾಡುತ್ತಿದ್ದೇವೆ. ಖಾಸಗಿ ಏಜೆನ್ಸಿಗಳು ಸರಿಯಾದ ಸೇವೆ ಒದಗಿಸುತ್ತಿಲ್ಲ. 8 ತಿಂಗಳಿಂದ ವೇತನ ಬಾಕಿ ಉಳಿಸಿಕೊಂಡಿದೆ. ಸರ್ಕಾರ ಸಹಕಾಯಿ ಸಂಸ್ಥೆ ಮೂಲಕ ಗುತ್ತಿಗೆ ನೌಕರರಿಗೆ ಅವಕಾಶ ಕಲ್ಪಿಸಲು ಆದೇಶಿಸಿದೆ. ಅಕ್ಕ&ಪಕ್ಕದ ಜಿಲ್ಲೆಗಳಲ್ಲಿ ಈಗಾಗಲೇ ಜಾರಿ ಆಗಿದೆ. ನಮ್ಮ ಜಿಲ್ಲೆಯಲ್ಲಿ ಡಿಸಿ ಮಾಡಲು ಮನಸ್ಸು ಮಾಡುತ್ತಿಲ್ಲ. ಇದನ್ನು ಖಂಡಿಸಿ ಮೂರು ದಿನ ಪ್ರತಿಭಟನೆ ಮಾಡಿದರೂ ಸ್ಪಂದಿಸಿಲ್ಲ. ಬದಲಿಗೆ ನಮ್ಮನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಿದರೆಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಜ.31ರೊಳಗೆ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲಿದ್ದರೆ ಎಲ್ಲ ಗುತ್ತಿಗೆ ನೌಕರರು ಕೆಲಸ ಸ್ಥಗಿತಗೊಳಿಸಿ ಅರ್ನಿಧಿಷ್ಟ ಹೋರಾಟ ಹಮ್ಮಿಕೊಳ್ಳುತ್ತೇವೆ. ನಮಗಾಗುತ್ತಿರುವ ಅನ್ಯಾಯ ಕುರಿತು ಕಾರ್ಮಿಕ ಅಧಿಕಾರಿಗಳಿಗೂ ದೂರು ನೀಡಿದ್ದೇವೆಂದು ಹೇಳಿದರು. ಪ್ರಮುಖರಾದ ಕಾಸಿಂ ಸರ್ದಾರ, ಸುಂಕಪ್ಪ ಗದಗ, ಮಹಮ್ಮದ ರಫಿಕ್​, ಕೀರಪ್ಪ ಇದ್ದರು.

Share This Article

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…

ಜಗತ್ತಿನ ಈ 5 ಜನರ ಮುಂದೆ ಯಾವಾಗಲೂ ಮೌನವಾಗಿರಬೇಕಂತೆ! ಚಾಣಕ್ಯ ನೀತಿ ಬಗ್ಗೆ ತಿಳಿಯಿರಿ | Chanakya Niti

Chanakya Niti : ಚಾಣಕ್ಯ ಎಂದ ಕ್ಷಣ ಕಣ್ಣ ಮುಂದೆ ಬರುವುದೆ ಚಾಣಕ್ಷ್ಯತನ, ಬುದ್ಧಿವಂತಿಕೆ. ಹಾಗಾಗಿ,…

ಮಾವಿನಹಣ್ಣು ತಿಂದು ಈಸಿಯಾಗಿ ದೇಹದ ತೂಕ ಇಳಿಸಬಹುದು! ಹೊಸ ಅಧ್ಯಯನ.. mango

mango: ತೂಕ ಇಳಿಸಿಕೊಳ್ಳಲು ಬಯಸುವ ಜನರು ಹೆಚ್ಚಾಗಿ ಮಾವಿನಹಣ್ಣನ್ನು ತಪ್ಪಿಸುತ್ತಾರೆ. ಆದರೆ ಇತ್ತೀಚಿನ ಅಧ್ಯಯನವು ತೂಕ…