ಕೊಪ್ಪಳ:ಗಂಗಾವತಿ ನಿವಾಸಿ ಹುಸೇನ್ ಸಾಬ್ ಮೇಲೆ ಹಲ್ಲೆ ಮಾಡಿ ಹಣ ದೋಚಿ, ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿದ ದುರುಳರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳವಂತೆ ಒತ್ತಾಯಿಸಿ ವಿವಿಧ ಸಂಟನೆಗಳ ಮುಖಂಡರು ಶನಿವಾರ ಎಸ್ಪಿ ಯಶೋದಾ ವಂಟಗೋಡಿಗೆ ಮನವಿ ಸಲ್ಲಿಸಿದರು.
ವೃದ್ಧ ಹುಸೇನ್ ಸಾಬ್ನನ್ನು ಬಲವಂತವಾಗಿ ಕರೆದೊಯ್ದು ಹಿಂಸಿಸಿದ್ದಾರೆ. ಅಲ್ಲದೇ ಮುಸ್ಲಿಂರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ.
ಹಿಂದು&ಮುಸ್ಲಿಂ ಗಲಭೆಗೆ ಪ್ರಚೋದನೆ ನೀಡಿದ್ದಾರೆ. ಕೋಮುವಾದಿಗಳು ಅವರ ಬಳಿ ಹಣ ಕಿತ್ತುಕೊಂಡು ಗಡ್ಡಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಇದೊಂದು ಸೂಕ್ಷ$್ಮ ವಿಷಯವಾಗಿದ್ದು, ಅವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು. ಬಸವರಾಜ ಶೀಲವಂತರ, ಎಸ್.ಎ.ಗಫಾರ್, ಸಲೀಂ ಅಳವಂಡಿ, ಹುಲುಗಪ್ಪ ಅಕ್ಕಿರೊಟ್ಟಿ, ನಿಂಗು ಜಿ.ಎಸ್., ಕೆ.ಬಿ.ಗೋನಾಳ, ಗಾಳೆಪ್ಪ ಮುಂಗೋಲಿ ಇತರರಿದ್ದರು.