ಕಾರ್ಖಾನೆ ವಿರೋಧಿಸಿ ಪತ್ರ ಚಳವಳಿ

district koppal mspl factory protest

 ಕೊಪ್ಪಳ: ನಗರಕ್ಕೆ ಹೊಂದಿಕೊಂಡು ಬಿಎಸ್ಪಿಎಲ್ ಬೃಹತ್ ಉಕ್ಕು ಉತ್ಪಾದನಾ ಕಾರ್ಖಾನೆ ನಿರ್ಮಾಣ ವಿರೋಧಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಸಂಚಾಲಕರು ಸೋಮವಾರ ಸರ್ಕಾರಕ್ಕೆ ಪತ್ರ ಬರೆದು ಪ್ರತಿಭಟಿಸಿದರು.

ಕೊಪ್ಪಳಕ್ಕೆ ಹೊಂದಿಕೊಂಡು ಬೃಹತ್ ಕಾರ್ಖಾನೆ ನಿರ್ಮಿಸಬಾರದು. ಬಿಎಸ್ಪಿಎಲ್ ಕಾರ್ಖಾನೆಗೆ ಸರ್ಕಾರ ನೀಡಿದ ಅನುಮತಿ ರದ್ದು ಮಾಡಬೇಕು. ಕಾರ್ಖಾನೆ ಓಡಿಸಿ ಕೊಪ್ಪಳ ಉಳಿಸಬೇಕು. ಈಗಿರುವ ಕಾರ್ಖಾನೆಗಳಿಂದ ಪರಿಸರ ಹಾಳಾಗುತ್ತಿದೆ. ದೊಡ್ಡ ಕಾರ್ಖಾನೆ ಸ್ಥಾಪನೆ ಆದಲ್ಲಿ ಮತ್ತಷ್ಟು ಮಾಲಿನ್ಯ ಹೆಚ್ಚುವುದು. ಇದಕ್ಕೆ ಅವಕಾಶ ನೀಡದಂತೆ ಒತ್ತಾಯಿಸಿದರು. 100ಕ್ಕೂ ಹೆಚ್ಚು ಜನರು ಪತ್ರ ಬರೆದು ಸಿಎಂಗೆ ಪೋಸ್ಟ್ ಮಾಡಿದರು.

ಸೇನೆ ಪದಾಧಿಕಾರಿಗಳಾದ ವಿಜಯಕುಮಾರ ಕವಲೂರು, ಜಿಎಸ್ ಗೋನಾಳ, ವಿನೋದ ಕುಮಾರ್ ಜಿ., ಶಿವಕುಮಾರ ಏಣಗಿ, ಚಂದ್ರು ಅಣ್ಣಿಗೇರಿ, ಗವಿಸಿದ್ದಪ್ಪ ಮಂಗಳಾಪುರ, ಮಹ್ಮದ್ ಗರ್ಸಗಲ್, ವಿನೋದ ಕುಮಾರ, ಸೋಹೇಲ್, ದೇವೆಂದ್ರಪ್ಪ ತೊಂಡಿಹಾಳ, ಶಾಮ್ ಬೇಣಗಿ, ಹನುಮಗೌಡ ಆಟೋ, ಶಕೀಲ್ ಅಹ್ಮದ್ ಬ್ಯಾಗವಾಟ್ ಇತರರಿದ್ದರು.

Share This Article

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…

ತೂಕ ಇಳಿಸಿಕೊಳ್ಳಲು ಬೆಳಿಗ್ಗೆ ಯಾವ ರೀತಿಯ ಉಪಹಾರ ಸೇವಿಸಬೇಕು ಗೊತ್ತಾ? Break Fast

Break Fast: ತೂಕ ಇಳಿಸಿಕೊಳ್ಳಲು ಬಯಸುವ ಜನರು ಸಾಮಾನ್ಯವಾಗಿ ಕೇವಲ ವ್ಯಾಯಾಮ ಮಾಡುವುದಿಲ್ಲ, ಜಿಮ್‌ಗೆ ಹೋಗುತ್ತಾರೆ…

ಇನ್ನು 7 ದಿನಗಳಲ್ಲಿ ಶುರುವಾಗಲಿದೆ ರಾಜಯೋಗ: ಈ 3 ರಾಶಿಯವರಿಗೆ ಏಪ್ರಿಲ್​ನಿಂದ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…