ಕೊಪ್ಪಳ: ಲೋಕಸಭೆ ಚುನಾವಣೆಗೆ ಶುಕ್ರವಾರ ಅಧಿಸೂಚನೆ ಪ್ರಟಕವಾಗಿದೆ. ಮೊದಲ ದಿನವೇ ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು, ಎಸ್ಯುಐ(ಕಮ್ಯೂನಿಷ್ಟ) ಹಾಗೂ ಓರ್ವ ಪಕ್ಷೇತರ ಅಭ್ಯರ್ಥಿ ಚುನಾವಣಾಧಿಕಾರಿ ನಲಿನ್ ಅತುಲ್ಗೆ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್, ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಹಾಗೂ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಅಭ್ಯರ್ಥಿ ಶರಣಪ್ಪ ತಲಾ ಎರಡು ನಾಮಪತ್ರ ಸಲ್ಲಿಸಿದರು. ಪಕ್ಷೇತರ ಅಭ್ಯರ್ಥಿಯಾಗಿ ಮಹಿಬುಬಸಾಬ ಒಂದು ಒಟ್ಟು ನಾಲ್ವರು ಅಭ್ಯರ್ಥಿಗಳು 7ನಾಮಿನೇಷನ್ ಸಲ್ಲಿಸಿದರು.
ಮೊದಲು ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ವಿಧಾನ ಸಭೆ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ವಿಪ ಸದಸ್ಯೆ ಹೇಮಲತಾ ನಾಯಕ, ಮಾಜಿ ಶಾಸಕ ಬಸವರಾಜ ದಢೇಸುಗೂರು, ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ, ಪ್ರಮುಖರಾದ ಡಾ.ಕೆ.ಜಿ.ಕುಲಕರ್ಣಿ, ಡಾ.ಮಹೇಶ ಗೋವನಕೊಪ್ಪ, ರಾಜು ಬಾಕಳೆ ಇತರರೊಡನೆ ಆಗಮಿಸಿ ಮಧ್ಯಾಹ್ನ 12.15ಕ್ಕೆ ನಾಮಪತ್ರ ಸಲ್ಲಿಕೆ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಬೆಳಗ್ಗೆಯೇ ಸ್ವಗ್ರಾಮ ಹಿಟ್ನಾಳದಿಂದ ಮನೆ ದೇವತೆ ಹುಲಿಗಿಯ ಹುಲಿಗೆಮ್ಮ ದೇವಿ ದೇವಾಲಯಕ್ಕೆ ತೆರಳಿ ಆಶೀರ್ವಾದ ಪಡೆದರು. ಬಳಿಕ ಮಧ್ಯಾಹ್ನ 1.30ಕ್ಕೆ ಚುನಾಣಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಸಿರಗುಪ್ಪ ಶಾಸಕ ನಾಗರಾಜ, ಜಿಪಂ ಮಾಜಿ ಅಧ್ಯಕ್ಷ ಎಸ್.ಬಿ.ನಾಗರಳ್ಳಿ, ಪ್ರಮುಖರಾದ ಆಸ್ೀ ಅಲಿ, ಗೂಳಪ್ಪ ಹಲಗೇರಿ ಇತರರಿದ್ದರು.
ಎಸ್ಯುಸಿಐ (ಕಮ್ಯೂನಿಷ್ಟ್) ಪಕ್ಷದ ಅಭ್ಯರ್ಥಿ ಶರಣಪ್ಪ ಲೇಬರ್ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ಮೆರವಣಿಗೆ ಮೂಲಕ ಆಗಮಿಸಿದರು. ಬಳಿಕ ಆಟೋದಲ್ಲಿ ಡಿಸಿ ಕಚೇರಿವರೆಗೆ ಆಗಮಿಸಿ ಸೂಚಕರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು.