ಕೊಪ್ಪಳ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸತಿ ಇಲಾಖೆಯಿಂದ ಗುರುವಾರ ಸಂತ ಸೇವಾಲಾಲ್ ಜಯಂತಿ ಆಚರಿಸಲಾಯಿತು.
ಸಹಾಯಕ ಆಯುಕ್ತ ಕ್ಯಾ.ಮಹೇಶ್ ಮಾಲಗಿತ್ತಿ ಹಾಗೂ ಅಬಕಾರಿ ಉಪ ಆಯುಕ್ತ ಬಿ.ಆರ್.ಹಾಲೇಶ್ ಸಂತ ಸೇವಾಲಾಲ್ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಅಬಕಾರಿ ಅಧೀಕ್ಷಕಿ ಭಾರತಿ, ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಸಮುದಾಯದ ಮುಖಂಡರಾದ ಅಚಲಾಪುರ ತಾಂಡಾದ ಯಮನೂರಪ್ಪ, ಹನುಮಂತಪ್ಪ ಮಡ್ಡಿ, ಕನಕಾಪುರ ತಾಂಡಾದ ಚಂದ್ರಶೇಖರ ದೊಡ್ಡಮನಿ ಇತರರಿದ್ದರು.