ಕೊಪ್ಪಳ: ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಸುರೇಶ ಭೂಮರಡ್ಡಿ ನೇಮಕವಾಗಿದ್ದಾರೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪದಾಧಿಕಾರಿಗಳ ಬದಲಾವಣೆ ಮಾಡಿರುವ ದಳಪತಿಗಳು ಜಿಲ್ಲಾ ಪದಾಧಿಕಾರಿಗಳಲ್ಲಿ ಹಲವು ಬದಲಾವಣೆ ಮಾಡಿದ್ದಾರೆ. ಹಾಲಿ ಜಿಲ್ಲಾಧ್ಯಕ್ಷ ವೀರೇಶ ಮಹಾಂತಯ್ಯನಮಠ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಿಸಿದ್ದು, ಅವರ ಜವಾಬ್ದಾರಿಯನ್ನು ಸುರೇಶ ಭೂಮರಡ್ಡಿಗೆ ವಹಿಸಲಾಗಿದೆ.
ಈ ಕರಿತು ವಿಜಯವಾಣಿಗೆ ಪ್ರತಿಕ್ರಿಯಿಸಿದ ಭೂಮರಡ್ಡಿ, ಇತ್ತೀಚೆಗೆ ನಡೆದ ಸಭೆಯಲ್ಲಿ ಎಚ್.ಡಿ.ಕುಮಾರ ಸ್ವಾಮಿ ಅವರು ಜವಾಬ್ದಾರಿ ವಹಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಅದರಂತೆ ಒಪ್ಪಿಕೊಂಡಿರುವೆ. ಎಲ್ಲ ಪದಾಧಿಕಾರಿಗಳ ಸಭೆ ನಡೆಸಿ ಪಕ್ಷ ಸಂಗಟನೆಗೆ ಆದ್ಯತೆ ನೀಡಲಾಗುವುದು ಎಂದರು.