More

    ಸಾಮಾಜಿಕ ಜಾಲತಾಣಕ್ಕೆ ಮರಳಿದ ಮೋಹಕತಾರೆ ರಮ್ಯಾರಿಂದ ಸಮಯ ಮೀಸಲಿಡಲು ಕರೆ…!

    ಬೆಂಗಳೂರು: ಸಾಮಾಜಿಕ ಜಾಲತಾಣದಿಂದ ದೂರ ಉಳಿದಿದ್ದ ಮೋಹಕ ತಾರೆ ರಮ್ಯಾ ಇದೀಗ ಫೇಸ್​ಬುಕ್​ನಲ್ಲಿ ಸಕ್ರೀಯರಾಗಿದ್ದು, ಇಡೀ ದೇಶವೇ ಮರುಗುತ್ತಿರುವ ಘಟನೆಯೊಂದಕ್ಕೆ ರಮ್ಯಾ ಸಹ ಮರುಕ ವ್ಯಕ್ತಪಡಿಸಿದ್ದಾರೆ.

    ಉತ್ತರ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಪೈನಾಪಲ್​​ನಲ್ಲಿ ಸ್ಪೋಟಕ ತುಂಬಿ, ಗರ್ಭಿಣಿ ಆನೆಗೆ ತಿನ್ನಲು ಕೊಟ್ಟು ಅದರ ಸಾವಿಗೆ ಕಾರಣರಾಗಿದ್ದಾರೆ. ಈ ಘಟನೆ ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆನೆ ಸಾವಿಗೆ ಸಂತಾಪ ಸೂಚಿಸಿದ್ದು, ದುಷ್ಕರ್ಮಿಗಳ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

    ಇದನ್ನೂ ಓದಿ: ಗರ್ಭಿಣಿ ಆನೆಗೆ ಸ್ಫೋಟಕ ತುಂಬಿದ ಪೈನಾಪಲ್​​ ತಿನ್ನಲು ಕೊಟ್ಟ ಜನರು; ದಾರುಣವಾಗಿ ಮೃತಪಟ್ಟ ಮುಗ್ಧ ಪ್ರಾಣಿ

    ಆನೆ ಕೊಂದವರ ವಿರುದ್ಧ ಕ್ರಿಮಿನಲ್​ ಮೊಕದ್ದಮೆ ದಾಖಲಾಗಬೇಕು ಎಂಬ ಅಭಿಯಾನ ಶುರುವಾಗಿದ್ದು, ಈ ಬಗ್ಗೆ ತಮ್ಮ ಫೇಸ್​ಬುಕ್​ನಲ್ಲಿ ಬರೆದುಕೊಂಡಿರುವ ರಮ್ಯಾ ಕರೊನಾ ಸಂದರ್ಭದಲ್ಲಿ ನೀವೆಲ್ಲರೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೀರಿ ಮತ್ತು ಸುರಕ್ಷಿತವಾಗಿರುತ್ತೀರಿ ಎಂದು ಭಾವಿಸುತ್ತೇನೆ. ಈ ಅಭಿಯಾನಕ್ಕೆ ಸಹಿ ಹಾಕಲು ಸ್ವಲ್ಪ ಸಮಯ ಮೀಸಲಿಡಿ ಎಂದು ಕರೆ ನೀಡಿದ್ದಾರೆ.

    ಸಾಮಾಜಿಕ ಜಾಲತಾಣಕ್ಕೆ ಮರಳಿದ ಮೋಹಕತಾರೆ ರಮ್ಯಾರಿಂದ ಸಮಯ ಮೀಸಲಿಡಲು ಕರೆ...!

    2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯ ಸೋಲು ಅನುಭವಿಸಿದ ಬಳಿಕ ಕಾಂಗ್ರೆಸ್​ನ ಸಾಮಾಜಿಕ ಜಾಲತಾಣ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ ರಮ್ಯಾ, ಜಾಲತಾಣಗಳಿಗೆ ಗುಡ್​ ಬೈ ಹೇಳಿ ನಾಪತ್ತೆಯಾಗಿದ್ದರು. ಅಂದಿನಿಂದ ಈವರೆಗೂ ಅವರ ಒಮ್ಮೆಯು ಕಾಣಿಸಿಕೊಂಡಿಲ್ಲ. ಫೇಸ್​ಬುಕ್​ನಲ್ಲಿ ಕೊನೆಯದಾಗಿ 2019, ಮೇ 29ರಂದು ಫೋಟೋ ಅಪ್​ಲೋಡ್​ ಆಗಿದೆ. ಇದೀಗ ರಮ್ಯಾ ಅವರು ದಿಢೀರನೇ ಪ್ರತ್ಯಕ್ಷವಾಗಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ.

    ಇದನ್ನೂ ಓದಿ: PHOTO GALLERY| ಹುಟ್ಟುಹಬ್ಬ ಸಂಭ್ರಮದಲ್ಲಿರೋ ಪ್ರಿಯಾಮಣಿಯವರ ಹಾಟ್​ ಫೋಟೋ ಗ್ಯಾಲರಿ ನಿಮಗಾಗಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts