ಬೆಂಗಳೂರು: ಸಾಮಾಜಿಕ ಜಾಲತಾಣದಿಂದ ದೂರ ಉಳಿದಿದ್ದ ಮೋಹಕ ತಾರೆ ರಮ್ಯಾ ಇದೀಗ ಫೇಸ್ಬುಕ್ನಲ್ಲಿ ಸಕ್ರೀಯರಾಗಿದ್ದು, ಇಡೀ ದೇಶವೇ ಮರುಗುತ್ತಿರುವ ಘಟನೆಯೊಂದಕ್ಕೆ ರಮ್ಯಾ ಸಹ ಮರುಕ ವ್ಯಕ್ತಪಡಿಸಿದ್ದಾರೆ.
ಉತ್ತರ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಪೈನಾಪಲ್ನಲ್ಲಿ ಸ್ಪೋಟಕ ತುಂಬಿ, ಗರ್ಭಿಣಿ ಆನೆಗೆ ತಿನ್ನಲು ಕೊಟ್ಟು ಅದರ ಸಾವಿಗೆ ಕಾರಣರಾಗಿದ್ದಾರೆ. ಈ ಘಟನೆ ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆನೆ ಸಾವಿಗೆ ಸಂತಾಪ ಸೂಚಿಸಿದ್ದು, ದುಷ್ಕರ್ಮಿಗಳ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿ: ಗರ್ಭಿಣಿ ಆನೆಗೆ ಸ್ಫೋಟಕ ತುಂಬಿದ ಪೈನಾಪಲ್ ತಿನ್ನಲು ಕೊಟ್ಟ ಜನರು; ದಾರುಣವಾಗಿ ಮೃತಪಟ್ಟ ಮುಗ್ಧ ಪ್ರಾಣಿ
ಆನೆ ಕೊಂದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಬೇಕು ಎಂಬ ಅಭಿಯಾನ ಶುರುವಾಗಿದ್ದು, ಈ ಬಗ್ಗೆ ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ರಮ್ಯಾ ಕರೊನಾ ಸಂದರ್ಭದಲ್ಲಿ ನೀವೆಲ್ಲರೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೀರಿ ಮತ್ತು ಸುರಕ್ಷಿತವಾಗಿರುತ್ತೀರಿ ಎಂದು ಭಾವಿಸುತ್ತೇನೆ. ಈ ಅಭಿಯಾನಕ್ಕೆ ಸಹಿ ಹಾಕಲು ಸ್ವಲ್ಪ ಸಮಯ ಮೀಸಲಿಡಿ ಎಂದು ಕರೆ ನೀಡಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ಬಳಿಕ ಕಾಂಗ್ರೆಸ್ನ ಸಾಮಾಜಿಕ ಜಾಲತಾಣ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ ರಮ್ಯಾ, ಜಾಲತಾಣಗಳಿಗೆ ಗುಡ್ ಬೈ ಹೇಳಿ ನಾಪತ್ತೆಯಾಗಿದ್ದರು. ಅಂದಿನಿಂದ ಈವರೆಗೂ ಅವರ ಒಮ್ಮೆಯು ಕಾಣಿಸಿಕೊಂಡಿಲ್ಲ. ಫೇಸ್ಬುಕ್ನಲ್ಲಿ ಕೊನೆಯದಾಗಿ 2019, ಮೇ 29ರಂದು ಫೋಟೋ ಅಪ್ಲೋಡ್ ಆಗಿದೆ. ಇದೀಗ ರಮ್ಯಾ ಅವರು ದಿಢೀರನೇ ಪ್ರತ್ಯಕ್ಷವಾಗಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ.
ಇದನ್ನೂ ಓದಿ: PHOTO GALLERY| ಹುಟ್ಟುಹಬ್ಬ ಸಂಭ್ರಮದಲ್ಲಿರೋ ಪ್ರಿಯಾಮಣಿಯವರ ಹಾಟ್ ಫೋಟೋ ಗ್ಯಾಲರಿ ನಿಮಗಾಗಿ