More

    ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ತಲೆಮರೆಸಿಕೊಂಡಿದ್ದ ಮಾಜಿ ಕಾರ್ಪೊರೇಟರ್ ಸಿಸಿಬಿ ಬಲೆಗೆ

    ಬೆಂಗಳೂರು: ದೇಶದ ಗಮನಸೆಳೆದ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನ ಬಳಿಕ ಮತ್ತೋರ್ವ ಆರೋಪಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಪುಲಕೇಶಿನಗರ ವಾರ್ಡ್​ನ ಮಾಜಿ ಕಾರ್ಪೊರೇಟರ್ ಜಾಕೀರ್ ಬಂಧಿತ ಆರೋಪಿ.

    ಮಾಜಿ ಮೇಯರ್ ಸಂಪತ್ ರಾಜ್​ ನ ಆಪ್ತನಾಗಿರುವ ಜಾಕೀರ್ ಗಲಭೆ ಸೃಷ್ಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಎಂದು ಹೇಳಲಾಗುತ್ತಿದೆ. ಈಗಾಗಲೇ ಸಿಸಿಬಿ ಪೊಲೀಸರು ಈತನಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಒಮ್ಮೆ ವಿಚಾರಣೆಗೆ ಹಾಜರಾಗಿದ್ದ ಜಾಕೀರ್ ಬಳಿಕ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದ.

    ಇದನ್ನೂ ಓದಿ: ಡಿಜೆ ಹಳ್ಳಿ ಗಲಭೆ​: ಬೆಂಗಳೂರಿನ 43 ಕಡೆ ಏಕಕಾಲಕ್ಕೆ ಎನ್​ಐಎ ದಾಳಿ, ಮಾರಕಾಸ್ತ್ರ ಜಪ್ತಿ

    ಜಾಕೀರ್ ಇರುವಿಕೆಯ ಸುಳಿವು ಪಡೆದ ಸಿಸಿಬಿ ಪೊಲೀಸರು ನಿನ್ನೆ ತಡರಾತ್ರಿ ವಿಶೇಷ ಕಾರ್ಯಾಚರಣೆ ನಡೆಸಿ ಜಾಕೀರ್​ನನ್ನು ಬಂಧಿಸಿದ್ದಾರೆ. (ದಿಗ್ವಿಜಯ ನ್ಯೂಸ್)

    ಕೋವಿಡ್​ಗೆ ಬಲಿಯಾದ ಭೋಪಾಲ ಅನಿಲ ದುರಂತ ಸಂತ್ರಸ್ತರ ಸಂಖ್ಯೆ ಎಷ್ಟು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts