blank

ಮುಡಾ ಹೆಸರಿನಲ್ಲಿ ಸಿಎಂ ಸಿದ್ದರಾಮಯ್ಯ, ಕುಟುಂಬಸ್ಥರ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ: DK Shivakumar ಆರೋಪ

Siddu DK

ಬೆಳಗಾವಿ: ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಮುಖ್ಯಮಂತ್ರಿಗಳಾಗಲಿ, ಅವರ ಧರ್ಮಪತ್ನಿ ಅವರಾಗಲಿ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ (DK Shivakumar) ಹೇಳಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಒಂದು ಪ್ರಕರಣ ಎಂದರೆ ಅದರ ತನಿಖೆ ಸುದೀರ್ಘ ಪ್ರಕ್ರಿಯೆಯಾಗಿದೆ. ಇಲ್ಲಿ ಅಕ್ರಮ ನಡೆದಿದೆಯೇ ಇಲ್ಲವೇ ಎಂದು ನ್ಯಾಯಾಲಯ ವಿಚಾರಣೆ ಮಾಡಬೇಕೆ ಹೊರತು, ನೀವು ನಾನು ವಿಚಾರಣೆ ಮಾಡುವಂತಹದಲ್ಲ. ನಾನು ಇಡಿ ತನಿಖೆ ನೋಡಿದ್ದೇನೆ. ಈ ಪ್ರಕರಣದ ಬಗ್ಗೆ ನಾನು ಹೆಚ್ಚಿಗೆ ಏನು ಹೇಳುವುದಿಲ್ಲ. ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಮುಖ್ಯಮಂತ್ರಿಗಳಾಗಲಿ, ಅವರ ಧರ್ಮಪತ್ನಿ ಅವರಾಗಲಿ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ. ಈ ವಿಚಾರ ಬಿಟ್ಟು ರಾಜ್ಯದ ವಿಚಾರದ ಬಗ್ಗೆ ಗಮನಹರಿಸಿ ಎಂದು ಸಲಹೆ ನೀಡಿದ್ದಾರೆ.

DK Shivakumar

ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣದ ಕುರಿತು ಪ್ರತಿಕ್ರಿಯಿಸಿ, ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ. ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಘನ ಉಪಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷರು, ರಾಜ್ಯ ಸಭೆ ವಿರೋಧ ಪಕ್ಷದ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಹಾಗೂ ಪರಿಷತ್ತಿನ ಸಭಾಪತಿಗಳು ಭಾಗವಹಿಸಲಿದ್ದಾರೆ. ಎಲ್ಲಾ ಪಕ್ಷದ ಶಾಸಕರಿಗೂ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದ ನಂತರ ನೆನಪಿಗಾಗಿ ಎಲ್ಲಾ ಶಾಸಕರ ಗುಂಪು ಫೋಟೋ ತೆಗೆಯಲಾಗುವುದು. ನಂತರ ಅತಿಥಿಗಳು ಹಾಗೂ ಆಹ್ವಾನಿತರಿಗೆ ಮುಖ್ಯಮಂತ್ರಿಗಳು ಭೋಜನಕೂಟ ಏರ್ಪಡಿಸಲಿದ್ದಾರೆ. ಶಾಸಕರ ಹೊರತಾಗಿ ಗಂಗಾಧರ ದೇಶಪಾಂಡೆ ಅವರ ಕುಟುಂಬ ಸೇರಿದಂತೆ ಪ್ರಮುಖ ಕುಟುಂಬದವರಿಗೂ ಆಹ್ವಾನ ನೀಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ತಿಳಿಸಿದ್ದಾರೆ.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತನ್ನ ಮರಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದ ತಾಯಿ ಶ್ವಾನ; ಮನಕಲುಕುವ Video Viral

KL Rahul ಅಲ್ಲವೇ ಅಲ್ಲ… ಡೆಲ್ಲಿ ಕ್ಯಾಪಿಟಲ್ಸ್​ ತಂಡದ ನಾಯಕ ಯಾರು ಎಂಬುದನ್ನು ರಿವೀಲ್​ ಮಾಡಿದ RCB ಕೋಚ್

Share This Article

ಈ ಆರೋಗ್ಯ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ತುಪ್ಪವನ್ನು ತಿನ್ನಲೇ ಬಾರದು ಗೊತ್ತಾ? ghee benefits and risks

ಬೆಂಗಳೂರು: ( ghee benefits and risks) ಹಾಲಿನ ಉತ್ಪನ್ನಗಳು ಆರೋಗ್ಯಕ್ಕೆ ಒಳ್ಳೆಯದು.  ತುಪ್ಪ ಹಲವು…

ಬಿಸಿಲಿನ ವಾತಾವರಣದಲ್ಲಿ ನಿಮ್ಮ ಕಾರಿನೊಳಗೆ ತಂಪಾಗಿರಲು ಬಯಸುವಿರಾ? ಈ ಟ್ರಿಕ್ ಟ್ರೈ ಮಾಡಿ.. Summer Car Tips

ಬೆಂಗಳೂರು: (Summer Car Tips ) ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಸಿಲಿಇಂದ ರಕ್ಷಣೆ ಪಡೆಯಲು…

ಹಠಾತ್ತನೆ ಮದ್ಯಪಾನ ತ್ಯಜಿಸುವುದರಿಂದ ಸಾಯ್ತಾರಾ? ಆಲ್ಕೋಹಾಲ್​ ಬಿಡುವುದಾದ್ರೂ ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ… | Alcohol

Alcohol: ಮದ್ಯಪಾನದಿಂದ ಉಂಟಾಗುವ ಸಾವುಗಳ ಕುರಿತು ಬ್ರಿಟನ್​ನ ರಾಷ್ಟ್ರೀಯ ಅಂಕಿ ಅಂಶಗಳ ಕಚೇರಿ(ONS) ಅಘತಕಾರಿ ಅಂಕಿ…