More

    ಉತ್ತರ ಕನ್ನಡ ತಲುಪಿದ ಡಿಸಿಎಂ ಡಿ.ಕೆ.ಶಿವಕುಮಾರ್

    ಕಾರವಾರ: ಲೋಕಸಭೆ ಚುನಾವಣೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶುವಕುಮಾರ್ ಅವರು ದೇವಸ್ಥಾನಗಳ ಓಡಾಟ ಪ್ರಾರಂಭಿಸಿದ್ದು, ಮಂಗಳವಾರ ಉತ್ತರ ಕನ್ನಡ ತಲುಪಿದ್ದಾರೆ.

    ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳ ಪ್ರಮುಖ ದೇವಾಲಯಗಳಿವೆ ಮಂಗಳವಾರ ಭೇಟಿ ನೀಡಿದ ಅವರು ರಾತ್ರಿ ಹೊನ್ನಾವರ ತಾಲೂಕಿನ ಇಡಗುಂಜಿಗೆ ಭೇಟಿ ನೀಡಿದರು.

    ರಾತ್ರಿ ಗೋಕರ್ಣದ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದರು.‌ ಮಾ.27 ರಂದು ಅವರು ಬೆಳಗ್ಗೆ ಮಹಾಬಲೇಶ್ವರ ಆತ್ಮಲಿಂಗದ ದರ್ಶನ ಪಡೆಯುವರು. ನಂತರ ಕುಮಟಾ ದಲ್ಲಿ ನಡೆಯುವ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವರು.

    ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಅಂಜಲಿ ನಿಂಬಾಳಕರ್ ಪರ ಕುಮಟಾ ಹವ್ಯಕ ಸಭಾ ಭವನದಲ್ಲಿ ಪ್ರಚಾರ ನಡೆಸುವರು.

    ನಮ್ಮ ಗ್ಯಾರಂಟಿ ಯೋಜನೆಗಳಿಗೆ ಐದು ವರ್ಷಗಳ ವಾರಂಟಿ ಇದೆ

    “ನಮ್ಮ ಗ್ಯಾರಂಟಿ ಯೋಜನೆಗಳಿಗೆ ಐದು ವರ್ಷಗಳ ವಾರಂಟಿ ಇದೆ. ಇದಕ್ಕೆ ಅಗತ್ಯವಾದ ಅನುದಾನವನ್ನು ಬಜೆಟ್ ನಲ್ಲಿ ಇಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

    ಶೃಂಗೇರಿಯ ಗೌರಿಗದ್ದೆ ಆಶ್ರಮಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು:

    “ಫ್ಯಾನ್, ಕುಕ್ಕರ್ ಗಳಿಗೆ ಒಂದು ವರ್ಷದ ವಾರಂಟಿ ಇದ್ದರೆ, ನಮಗೆ ಜನ ಐದು ವರ್ಷಗಳ ವಾರಂಟಿ ನೀಡಿದ್ದಾರೆ. ಈ ವಾರಂಟಿಯನ್ನು 10 ವರ್ಷಗಳಿಗೆ ನೀಡುವಂತೆ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥಿಸುತ್ತಿದ್ದೇನೆ.

    ನಮ್ಮ ಪ್ರಾರ್ಥನೆಯ ಫಲ.”

    ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆ ವಿಫಲ ಆಗುವುದಿಲ್ಲ. ಪ್ರಾರ್ಥನೆಗೆ ಫಲ ಖಂಡಿತವಾಗಿ ಸಿಗುತ್ತದೆ. ಹೀಗಾಗಿ ನಾನು ಧರ್ಮ ಯುದ್ಧ ಆರಂಭವಾಗುವ ಮುನ್ನ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ನಮ್ಮ ಪಕ್ಷ ಹಾಗೂ ರಾಜ್ಯದ ಜನರ ಪರವಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದೇನೆ. ಈ ನಾಡು ಸುಭಿಕ್ಷವಾಗಲಿ, ಒಳ್ಳೆಯ ಆಡಳಿತ ನೀಡುವ ಶಕ್ತಿ ನೀಡಲಿ ಎಂದು ಕೇಳಿಕೊಂಡಿದ್ದೇನೆ. ನಾವು ನುಡಿದಂತೆ ನಡೆದಿರುವುದು ಕೂಡ

    ತಂಗಡಗಿ ಅವರನ್ನು ಲೀಡರ್ ಮಾಡುತ್ತಿದ್ದಾರೆ:

    ಸಚಿವ ಶಿವರಾಜ್ ತಂಗಡಗಿ ಅವರ ವಿವಾದಾತ್ಮಕ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಆಡುಭಾಷೆಯಲ್ಲಿ ಕಪಾಳಕ್ಕೆ ಹೊಡೆಯಿರಿ ಎಂದು ಹೇಳಿರಬಹುದು. ಇದೇನು ದೊಡ್ಡ ವಿಚಾರವಲ್ಲ. ತಂಗಡಗಿ ಅವರನ್ನು ದೊಡ್ಡ ಲೀಡರ್ ಆಗಿ ಮಾಡುತ್ತಿದ್ದಾರೆ, ಮಾಡಲಿ” ಎಂದರು.

    ಸುರೇಶ್ ಪ್ರತಿ ಮನೆಗೂ ಗೊತ್ತು

    ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಗ್ಗೆ ಕೇಳಿದಾಗ, “2013ರಲ್ಲೂ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಮೂಲಕ ದೇವೇಗೌಡರ ಸೊಸೆಯನ್ನು ಕಣಕ್ಕಿಳಿಸಿದ್ದವು. ಆಗಲೂ ಇದೇ ಪರಿಸ್ಥಿತಿ ಇತ್ತು. ಆದರೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನ ಸುರೇಶ್ ಅವರನ್ನು ಗೆಲ್ಲಿಸಿದ್ದರು. ಆಗಲೂ ಸಿದ್ದರಾಮಯ್ಯ ಅವರ ಸರ್ಕಾರ ಇತ್ತು. ಈಗ ಸುರೇಶ್ ಅವರು ಮಾಡಿರುವ ಜನಸೇವೆ ಕೂಡ ಅವರ ಬೆನ್ನಿಗೆ ಇದೆ. ಸುರೇಶ್ ಪ್ರತಿ ಪಂಚಾಯ್ತಿ ಸದಸ್ಯನಂತೆ ಕ್ಷೇತ್ರದ ಜನರ ಸೇವೆ ಮಾಡಿದ್ದಾರೆ. ಸುರೇಶ್ ಪ್ರತಿ ಮನೆಗೂ ಗೊತ್ತು. ಹೀಗಾಗಿ ಜನ ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದರು.

    ಇದನ್ನೂ ಓದಿ: ಅಂಕೋಲಾ‌ ಪಟ್ಟಣಕ್ಕೆ ನುಗ್ಗಿದ ಬೃಹತ್ ಬಾವಲಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts