More

    ಚುನಾವಣಾ ಆಯೋಗ ಕಣ್ಮುಚ್ಚಿ ಕುಳಿತಿದೆ

    ತುಮಕೂರು: ಶಿರಾದಲ್ಲಿ ಬಿಜೆಪಿ ಹಣ ಹಂಚಿಕೆ ಮಾಡುತ್ತಿದ್ದರೂ ಎಲೆಕ್ಷನ್ ಕಮಿಷನ್ ಕಣ್ಣುಮುಚ್ಚಿ ಕೂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದರು.

    ಶಿರಾ ತಾಲೂಕಿನ ಚನ್ನೇನಹಳ್ಳಿಯಲ್ಲಿ ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಪರ ಚುನಾವಣಾ ಪ್ರಚಾರ ನಡೆಸಿದ ಅವರು, ಆರ್.ಆರ್.ನಗರದಲ್ಲೂ ಹೀಗೆ ಆಗಿದೆ. ಬಿಜೆಪಿ ನೋಟು ಕಾಂಗ್ರೆಸ್​ಗೆ ವೋಟು ಎಂದಿದ್ದಕ್ಕೆ ನನ್ನ ಮೇಲೆ ದೂರು ಕೊಟ್ಟಿದ್ದಾರೆ ಎಂದು ಹರಿಹಾಯ್ದರು.

    ಇದನ್ನೂ ಓದಿ: ತಾರತಮ್ಯ ಆರೋಪ ಹೊತ್ತಿದ್ದ ಫೇಸ್​​ಬುಕ್​ ಇಂಡಿಯಾದ ಸಾರ್ವಜನಿಕ ನೀತಿ ನಿರ್ದೇಶಕಿ ಅಂಖಿ ದಾಸ್​ ರಾಜೀನಾಮೆ

    ನಾನು ಎಲ್ಲಾ ದಾಖಲೆ ಇಟ್ಟುಕೊಂಡೇ ಮಾತನಾಡಿದ್ದೇನೆ. ಎಲ್ಲಾ ವಿಡಿಯೋ ದಾಖಲೆಗಳು ನನ್ನ ಬಳಿ ಇದೆ. ಮೊದಲು ಅಭ್ಯರ್ಥಿಗಳನ್ನೇ ಅನರ್ಹ ಮಾಡಬೇಕು ಅನ್ಸುತ್ತೆ ಆ ರೀತಿ ಅವರು ಚುನಾವಣಾ ಅಕ್ರಮ ವೆಸಗುತ್ತಿದ್ದಾರೆ ಎಂದು ದೂರಿದರು.

    ಪ್ರತಿಯೊಂದು ವಿಚಾರದಲ್ಲೂ ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾನೂನು ವಿರುದ್ಧವಾಗಿ ಎಲೆಕ್ಷನ್ ಮಾಡ್ತಿದ್ದಾರೆ. ಜನ ಯಾವುದಕ್ಕೂ ಜಗ್ಗೋದಿಲ್ಲ ಬಗ್ಗೋದಿಲ್ಲಾ‌ ಎಂದರು. ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಚುನಾವಣೆ ನಡೆಸುತ್ತಿರುವುದಾಗಿ ಚುನಾವಣಾ ಆಯೋಗಕ್ಕೆ ನಾವು ದೂರು ದಾಖಲಿಸುತ್ತೇವೆ ಎಂದರು.

    ‘ಗೋ ಕರೊನಾ…’ ಎಂದ್ರೂ ಬಿಡಲಿಲ್ಲ ಸೋಂಕು; ಆಸ್ಪತ್ರೆಗೆ ದಾಖಲಾದ ಕೇಂದ್ರ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts