ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲಿನ ಸಿಬಿಐ ದಾಳಿಯು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇದು ಉಪಚುನಾವಣೆಯ ಸಂದರ್ಭ. ಹೀಗಾಗಿ ಈ ದಾಳಿ ರಾಜಕೀಯ ದುರುದ್ದೇಶದಿಂದ ಕೂಡಿದೆ. ಉಪಚುನಾವಣೆ ಒಂದು ತಿಂಗಳು ಇದೆ. ಜನರೇ ನೀವೇ ವಿಚಾರ ಮಾಡಿ ಎಂದು ಮನವಿ ಮಾಡಿದರು.
ಇದನ್ನೂ ಓದಿ: ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ: ದುಷ್ಟತನದ ಪರಮಾವಧಿ ಎಂದ ಸಿದ್ದುಗೆ ಕಮೆಂಟಿಗರಿಂದ ಗುದ್ದೋ ಗುದ್ದು!
ಚುನಾವಣೆಯಲ್ಲಿ ನಾವೆಲ್ಲರೂ ಪಾಲ್ಗೊಳ್ಳುತ್ತಿದ್ದೇವೆ. ಆ ದುರುದ್ದೇಶ ಇಟ್ಟುಕೊಂಡು ದಾಳಿ ಮಾಡಿದೆ. ಯಾವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ಮಾಡಿದ್ದಾರೆ ಎಂಬುದನ್ನು ಡಿಕೆಶಿಯವರನ್ನು ಕೇಳಿ. ಇಡಿ, ಐಟಿ ಅಥವಾ ಸಿಬಿಐ ಯಾವುದೇ ದಾಳಿ ಇರಲಿ ನಮ್ಮ ನಾಯಕರು ಸಮರ್ಥರಿದ್ದಾರೆ. ಕಾನೂನು ಮೇಲೆ ನಮಗೆ ವಿಶ್ವಾಸ ಇದೆ. ಕಾನೂನುಗೆ ತಲೆ ಬಾಗಲೇಬೇಕು ಎಂದರು.
ಉಪ ಚುನಾವಣೆ ಹಿನ್ನೆಲೆಯಲ್ಲಿ ನಮಗೆ ಅಡಚಣೆ ಮಾಡುವ ನಿಟ್ಟಿನಲ್ಲಿ ಈ ದಾಳಿ ಮಾಡಿದ್ದಾರೆ. ಏನಾಗುತ್ತದೆ ಮುಂದೆ ನೋಡೋಣ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್)
ಬೆಳ್ಳಂಬೆಳಗ್ಗೆ ಡಿಕೆ ಬ್ರದರ್ಸ್ಗೆ ಸಿಬಿಐ ಶಾಕ್: ಐಟಿ, ಇಡಿ ಬೆನ್ನಲ್ಲೇ ಡಿಕೆಶಿಗೆ ಮತ್ತೊಂದು ಆಘಾತ..!