ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 20ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನಕಲಕುವ ವಿಡಿಯೋವನ್ನು ಹಂಚಿಕೊಂಡು, ನೊಂದ ಕುಟುಂಬದವರಿಗೆ ಸಾಂತ್ವಾನ ಹೇಳಿದ್ದಾರೆ.
#ChamarajanagaraInsideStories uncovers the horror of the Oxygen Tragedy which shattered the life of 36 families!
— DK Shivakumar (@DKShivakumar) August 1, 2021
We are the voice of their despair and helplessness, as they grapple the devastating loss, seeking answers from the Govt!
Here is another heart wrenching account: pic.twitter.com/mZhjnaU5GW
ಚಾಮರಾಜನಗರದಲ್ಲಿ ಆಮ್ಲಜನಕ ಕೊರತೆಯಿಂದಾಗಿ, 36 ಜನರ ಕುಟುಂಬಗಳು ತಮ್ಮವರನ್ನು ಕಳೆದುಕೊಂಡು ಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಈ ದುರಂತದ ಹಿಂದಿನ ಸತ್ಯ ಹೊರಬರುತ್ತಿದೆ. ಆಡಳಿತದ ದೌರ್ಜನ್ಯಕ್ಕೊಳಗಾದ ಅಸಹಾಯಕರ ದನಿಯಾಗಿ ನಾವಿದ್ದೇವೆ ಎನ್ನುವ ಮೂಲಕ ನೊಂದ ಕುಟುಂಬದವರಿಗೆ ಧೈರ್ಯ ಹೇಳಿದ್ದಾರೆ.
ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್ ದುರಂತ: ರಾಜ್ಯ ಸರ್ಕಾರದಿಂದ ನ್ಯಾಯಾಂಗ ತನಿಖೆಗೆ ಆದೇಶ
ದುರಂತದ ಹಿನ್ನೆಲೆ:
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಮೇ 02 ರಂದು 20ಕ್ಕೂ ಹೆಚ್ಚು ಜನ ಕರೊನಾ ಸೋಂಕಿತರು ಪ್ರಾಣಬಿಟ್ಟಿದ್ದರು. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು.
ಆಕ್ಸಿಜನ್ ಹಾಹಾಕಾರ ಭೀಕರತೆಗೆ ಚಾಮರಾಜಗರದಲ್ಲಿನ ಈ ಘಟನೆಯೇ ಸಾಕ್ಷಿಯಾಗಿತ್ತು. ಆಕ್ಸಿಜನ್ ಇಲ್ಲದೆ 20ಕ್ಕೂ ಹೆಚ್ಚು ಮಂದಿ ಆಸ್ಪತ್ರೆ ಒಳಗೆ ಹೆಣವಾಗಿದ್ದರೆ, ಆಸ್ಪತ್ರೆ ಹೊರಗೆ ಹಲವರ ಶವ ಅನಾಥವಾಗಿ ಬಿದ್ದಿದ್ದ ದೃಶ್ಯ ಎಲ್ಲೆಡೆ ಹರಿದಾಡಿತ್ತು.
ಚಾಮರಾಜನಗರ ಆಕ್ಸಿಜನ್ ದುರಂತ: ರೋಹಿಣಿ ಸಿಂಧೂರಿ ಸೇಫ್, ಕೊನೆಗೂ ಆ ದಿನದ ರಹಸ್ಯ ಬಿಚ್ಚಿಟ್ಟ ಸಮಿತಿ