‘ಒಂದು ದೇಶ ಒಂದು ಚುನಾವಣೆ’ ಸಣ್ಣ ಪಕ್ಷಗಳನ್ನು ಮುಗಿಸುವ ಹುನ್ನಾರ: ಡಿ.ಕೆ. ಶಿವಕುಮಾರ್ ಕಿಡಿ

blank

ವಿಜಯಪುರ: “ಒಂದು ದೇಶ ಒಂದು ಚುನಾವಣೆ’ ಮೂಲಕ ಸಣ್ಣ ಪಕ್ಷಗಳನ್ನು ಮುಗಿಸುವ ಹುನ್ನಾರ ಕೇಂದ್ರ ಸರ್ಕಾರ ಹೊಂದಿದೆ. ಟಿಎಂಸಿ, ಡಿಎಂಕೆ, ಎಸ್​ಪಿ, ಕಮ್ಯುನಿಸ್ಟ್​ ಸೇರಿದಂತೆ ಪ್ರಾದೇಶಿಕ ಪಕ್ಷಗಳಿಂದ ಇಂಡಿಯಾ ಒಕ್ಕೂಟದ ಸಂಖ್ಯಾಬಲ ಹೆಚ್ಚಾಗಿದೆ. ಹೀಗಾಗಿ ಈ ಪಕ್ಷಗಳನ್ನು ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: CM Siddaramaiah | ಹೋರಾಟಕ್ಕೆ ತಕರಾರಿಲ್ಲ-ಕಾನೂನು ಕೈಗೆ ತೆಗೆದುಕೊಂಡರೆ ನಾನು ಸುಮ್ಮನಿರಲ್ಲ

ಇಂದು ವಿಜಯಪುರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ, “ಒಂದು ದೇಶ ಒಂದು ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಾಗಲೇ ವಿರೋಧ ವ್ಯಕ್ತಪಡಿಸಿದೆ. ಇದಕ್ಕೆ ಸಂಸತ್ತಿನಲ್ಲಿ ಅನುಮೋದನೆ ಪಡೆಯಲು ಕೇಂದ್ರ ಎನ್​ಡಿಎ ಸರ್ಕಾರಕ್ಕೆ ಸರಿಯಾದ ಸಂಖ್ಯಾಬಲವಿಲ್ಲ. ಮೂರನೇ ಎರಡು ಸಂಖ್ಯಾಬಲ ಬೇಕಾಗಿದ್ದು, ಅದನ್ನು ಹೇಗೆ ಸಾಧಿಸುತ್ತಾರೋ ಗೊತ್ತಿಲ್ಲ ಎಂದರು.

ಕೆಲವು ರಾಜ್ಯಗಳಲ್ಲಿ ಈಗಷ್ಟೇ ಚುನಾವಣೆಯಾಗಿದೆ, ಮತ್ತೆ ಕೆಲವು ಕಡೆಗಳಲ್ಲಿ ಚುನಾವಣೆಯಾಗಿ ಎರಡು, ಮೂರು ವರ್ಷಗಳಾಗಿವೆ. ಇವುಗಳನ್ನು ಹೇಗೆ ಮಾಡುತ್ತಾರೆ ಗೊತ್ತಿಲ್ಲ. ಇದು ಕಷ್ಟಕರವಾದ ಪ್ರಕ್ರಿಯೆ. ಅವರು ತಮ್ಮದೇ ಆದ ಅಜೆಂಡಾ ಇಟ್ಟುಕೊಂಡು ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರು ಈ ವಿಚಾರವಾಗಿ ಪಕ್ಷದ ನಿಲುವು ತಿಳಿಸಿದ್ದು, ನಾವು ಅದನ್ನು ಸಮರ್ಥಿಸಿಕೊಳ್ಳುತ್ತೇವೆ” ಎಂದು ತಿಳಿಸಿದರು.

ಕೇಂದ್ರದ ಅಧಿಸೂಚನೆ ನಂತರ ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ

ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳದ ಬಗ್ಗೆ ಕೇಳಿದಾಗ, “ಆಲಮಟ್ಟಿ ಜಲಾಶಯ ಎತ್ತರವನ್ನು 524 ಅಡಿಗಳಿಗೆ ಎತ್ತರಿಸಲು ನಾವು ಬದ್ಧವಾಗಿದ್ದೇವೆ. ಇದಕ್ಕಾಗಿ ಅಧಿಸೂಚನೆ ಹೊರಡಿಸಬೇಕಿದೆ. ಅಧಿಸೂಚನೆ ಹೊರಡಿಸುವ ಮುನ್ನ ಇದರ ಕಾಮಗಾರಿ ನಡೆಸಬೇಕೇ, ಬೇಡವೇ ಎಂದು ಚರ್ಚೆ ನಡೆಯುತ್ತಿದೆ. ಭೂಸ್ವಾಧೀನ ವಿಚಾರವಾಗಿ ಕೆಲವು ತಾರತಮ್ಯವಿದೆ. ಕೆಲವರು ನ್ಯಾಯಾಲಯದಿಂದ ಬೆಂಗಳೂರಿನ ಬೆಲೆಗಿಂತ ಹೆಚ್ಚು ಮೊತ್ತದ ಪರಿಹಾರವನ್ನು ಪಡೆಯಲು ಆದೇಶ ತೆಗೆದುಕೊಂಡು ಬಂದಿದ್ದಾರೆ. ಇದು ಹೇಗೆ ಸಾಧ್ಯ. ಈ ನ್ಯೂನ್ಯತೆ ಸರಿಪಡಿಸಬೇಕು. ಬೊಮ್ಮಾಯಿ ಅವರ ಸರ್ಕಾರ ರೈತರಿಗೆ ನಿಗದಿಪಡಿಸಿರುವ ದರದ ಬಗ್ಗೆ ನಮಗೆ ತಕರಾರಿಲ್ಲ. ಸೋಮವಾರ ಮುಖ್ಯಮಂತ್ರಿಗಳು ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ” ಎಂದು ತಿಳಿಸಿದರು.

ಧರಣಿನಿರತರು ಬಹಳಷ್ಟು ಬೇಡಿಕೆಗಳನ್ನಿಟ್ಟಿರುವ ಬಗ್ಗೆ ಕೇಳಿದಾಗ, “ನೂರು ಬೇಡಿಕೆಗಳನ್ನು ಬೇಕಾದರೂ ಇಡಲಿ. ಕಾನೂನು ಚೌಕಟ್ಟಿನಲ್ಲಿ ಕಾರ್ಯರೂಪಕ್ಕೆ ತರಲು ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳುತ್ತೇವೆ. ಆಲಮಟ್ಟಿ ಅಣೆಕಟ್ಟು ಎತ್ತರ 524 ಅಡಿಗೆ ಏರಿಸುವ ಬಗ್ಗೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು. ಅದನ್ನು ಮಾಡುವಷ್ಟರಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತೇವೆ. ಕೇಂದ್ರ ಸರ್ಕಾರ 6 ಸಾವಿರ ಕೋಟಿ ಅನುದಾನ ನೀಡಬೇಕಾಗಿದೆ” ಎಂದು ಹೇಳಿದ್ದಾರೆ.

ಪೂರ್ವ-ಪಶ್ಚಿಮ, ಅನ್ಯಗ್ರಹ ಜೀವಿ… ಬಾಬಾ ವಾಂಗಾ ನುಡಿದ ಈ ಭವಿಷ್ಯವಾಣಿ ಸನ್ನಿಹಿತ!?

 

Share This Article

ಇತ್ತೀಚೆಗೆ ಜನಪ್ರಿಯತೆ ಗಳಿಸುತ್ತಿರುವ ಬ್ಲೂ ಝೋನ್ ಡಯಟ್​ ಅಂದ್ರೆ ಏನು? ತೂಕ ಇಳಿಕೆಗೆ ಹೇಗೆ ಸಹಕಾರಿ? Blue Zone Diet

Blue Zone Diet : ಬ್ಲೂ ಝೋನ್ ಆಹಾರ ಪದ್ಧತಿ ಇತ್ತೀಚೆಗೆ ಭಾರಿ ಜನಪ್ರಿಯತೆ ಗಳಿಸುತ್ತಿದೆ.…

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…