More

    ಜನರ ಕಿವಿಗೆ ಚಂಡು ಹೂ ಇಟ್ಟಿದ್ದಾರೆ… ಈ‌ ಬಾರಿಯ ಬಜೆಟ್​ನ್ನು ಜಾತ್ರೆ ಕನ್ನಡಕ‌ ಹಾಕಿಕೊಂಡು ನೋಡಬೇಕಷ್ಟೇ!

    ಬೆಂಗಳೂರು: ಕಳೆದ ಬಾರಿ ಮಂಡಿಸಿದ್ದ ಬಜೆಟ್​ನಲ್ಲಿ ಏನು ಮಾಡಿದ್ರಿ ಎಂದು ಕೇಳಿದ್ದೆವು. ಈ ಪ್ರಶ್ನೆಗೆ ಇನ್ನೂ ಉತ್ತರ ಬಂದಿಲ್ಲ. 90% ಆಶ್ವಾಸನೆಯನ್ನು ಈವರೆಗೆ ಈಡೇರಿಸಿಲ್ಲ. ಜನರ ಕಿವಿಗೆ ಚೆಂಡು ಹೂ ಇಟ್ಟಿದ್ದಾರೆ. ಇದು ಇದು ಬಿಸಿಲ‌ ಕುದುರೆ ಬಜೆಟ್ ಎಂದು ಕೆಪಿಸಿಸಿ ರಾಜ್ಯಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಸಿಎಂ ಬೊಮ್ಮಾಯಿ ಮಂಡಿಸಿರುವ ರಾಜ್ಯ ಬಜೆಟ್ ಪ್ರತಿಕ್ರಿಯಿಸಿದ ಡಿಕೆಶಿ, ಜಿಎಸ್‌ಟಿ‌ ಹಣದಲ್ಲಿ 15% ಹಣ ಕೂಡ‌ ರಾಜ್ಯಕ್ಕೆ ಬರುವುದಿಲ್ಲ. ಈ‌ ಬಾರಿಯ ಬಜೆಟ್​ನ್ನು ಜಾತ್ರೆಯ ಕನ್ನಡಕ‌ ಹಾಕಿಕೊಂಡು ನೋಡಬೇಕು. ಧಮ್ ಧೈರ್ಯ ಅಂತ ಭಾಷ‌ಣ ಮಾಡುವ ಸಿಎಂ ಭಾಷಣದಲ್ಲಿ ಧಮ್ ಇರಲಿಲ್ಲ ಎಂದು ವ್ಯಂಗ್ಯವಾಡಿದರು.

    ಬೊಮ್ಮಾಯಿ ಅವರು ಬಿಜೆಪಿ ಎಂಎಲ್​ಎ‌ ಕ್ಷೇತ್ರಗಳಿಗೆ ಬಜೆಟ್​ನಲ್ಲಿ ಹೆಚ್ಚಿನ ಪ್ರಾಶಸ್ತ್ಯ ಕೊಟ್ಟಿದ್ದಾರೆ. ಮಹಾದಾಯಿ, ಕೃಷ್ಣಾಗೆ ಯಾವುದೇ ವಿಶೇಷ ಕೊಡುಗೆ ನೀಡಿಲ್ಲ. ಈ ಮೂಲಕ ಡಬಲ್ ಇಂಜಿನ್ ಆಫ್ ಆಗಿದೆ. ಮನೆಯ ಶೋಕೇಸ್​​ನಲ್ಲಿ ಪ್ರದರ್ಶನಕ್ಕೆ ಇಟ್ಟುವಂತಹ ಬಜೆಟ್ ಇದಾಗಿದೆ. ಈ ಬಜೆಟ್​​ನಿಂದ ಕಾಂಗ್ರೆಸ್​ಗೆ ಇನ್ನಷ್ಟು ಶಕ್ತಿ ಬರಲಿದೆ ಎಂದರು.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಅವಧಿಯ ಕೊನೆಯ ಬಜೆಟ್ ಮಂಡನೆ ಮಾಡಿದ್ದಾರೆ. ಹಣಕಾಸು ಖಾತೆಯನ್ನೂ ಹೊಂದಿರುವ ಸಿಎಂ ಬೊಮ್ಮಾಯಿ ಅವರ ಪಾಲಿಗೆ ಇದು 2ನೇ ಬಜೆಟ್​ ಮಂಡನೆಯಾಗಿದೆ. ಈ ಬಾರಿಯ ಬಜೆಟ್​ ಗಾತ್ರ ಒಟ್ಟು 3 ಲಕ್ಷ 9 ಸಾವಿರ 182 ಕೋಟಿ ರೂ. ಆಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts