More

    ಈಶ್ವರಪ್ಪ ಮನೆಗೆ ನಾನೇ ಹೋಗುತ್ತೇನೆ ಅವರೇ ಗುಂಡು ಹೊಡೆಯಲಿ: ಡಿ.ಕೆ. ಸುರೇಶ್

    ಬೆಂಗಳೂರು: ಮಹಾತ್ಮ ಗಾಂಧಿ ಅವರನ್ನು ಕೊಂದ ಪಕ್ಷ ಅವರದ್ದು. ನಾನೊಬ್ಬ ಸಣ್ಣ ವ್ಯಕ್ತಿ. ಕನ್ನಡಿಗರ ಪರ ಮಾತನಾಡಿದ್ದಕ್ಕೆ‌ ಹೀಗೆ ಹೇಳಿರಬಹುದು ಎಂದು ಸಂಸದ ಡಿ.ಕೆ. ಸುರೇಶ್​ ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ.

    ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಿಯವರನ್ನು ಒತ್ತಾಯಿಸುತ್ತೇನೆ ಎಂಬ ಮಾಜಿ ಸಚಿವ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಸುರೇಶ್​ ಅವರ ಮನೆಗೆ ನಾನೇ ಹೋಗುತ್ತೇನೆ. ಅವರೇ ನನಗೆ ಗುಂಡು ಹೊಡೆಯಲಿ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಕಾಂಗ್ರೆಸ್​ಗೆ ಗುಡ್​ಬೈ ಹೇಳಿದ ಬೆನ್ನಲ್ಲೇ ಎನ್​​ಸಿಪಿ ಸೇರ್ಪಡೆಯಾದ ಬಾಬಾ ಸಿದ್ದಿಕ್​

    ಮಹಾತ್ಮ ಗಾಂಧಿ ಅವರನ್ನು ಕೊಂದ ಪಕ್ಷ ಅವರದ್ದು. ನಾನೊಬ್ಬ ಸಣ್ಣ ವ್ಯಕ್ತಿ. ಕನ್ನಡಿಗರ ಪರ ಮಾತನಾಡಿದ್ದಕ್ಕೆ‌ ಹೀಗೆ ಹೇಳಿರಬಹುದು. ಇಂತಹ ಹೇಳಿಕೆ ನೀಡುವ ಮೂಲಕ ಬಡವರ ಮಕ್ಕಳನ್ನು ಯಾಕೆ ಬಾವಿಗೆ ತಳ್ಳುತ್ತೀರಿ. ನಾನೇ ಸಮಯ ಕೊಡುತ್ತೇನೆ. ಒಂದು ವಾರದಲ್ಲಿ ಯಾವಾಗ ಎಂದೂ ಹೇಳುತ್ತೇನೆ. ನಾನೇ ಈಶ್ವರಪ್ಪ ಅವರ ಮನೆಗೆ ಹೋಗುತ್ತೇನೆ. ಅವರೇ ನನಗೆ ಗುಂಡು ಹೊಡೆಯಲಿ.‌

    ಬಡವರ ಮಕ್ಕಳನ್ನು  ಅವರು ರೊಚ್ಚಿಗೆಬ್ಬಿಸುವುದು ಬೇಡ‌. ಅವರೇ ಆ ಕೆಲಸ ಮಾಡಲಿ. ಬಿಜೆಪಿಯಲ್ಲಿ ಈಶ್ವರಪ್ಪ ಅವರನ್ನು ಮೂಲೆಗುಂಪು ಮಾಡಿದ್ದಾರೆ. ಪಕ್ಷದ ನಾಯಕರ ಗಮನ ಸೆಳೆಯಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ಈಶ್ವರಪ್ಪ ಹೇಳಿಕೆಗೆ​ ತಿರುಗೇಟು ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts