ರಾಮನಗರ: ಒಂದೆಡೆ ರಾಜ್ಯದಲ್ಲಿ ಕರೊನಾ ಸಂಕಷ್ಟ ದಿನೇದಿನೆ ಹೆಚ್ಚುತ್ತಿದ್ದರೆ, ಇನ್ನೊಂದೆಡೆ ರಾಜಕೀಯ ಬೆಳವಣಿಗೆಗಳೂ ಗರಿಗೆದರಿವೆ.
ಬಿಜೆಪಿ, ಕಾಂಗ್ರೆಸ್ ವಲಯದಲ್ಲಿ ಒಬ್ಬೊಬ್ಬರು ಒಂದೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈಗ ಸಂಸದ ಡಿ.ಕೆ.ಸುರೇಶ್ ಅವರು ಒಂದು ಹೇಳಿಕೆ ನೀಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಅತಿ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಬಿಜೆಪಿಯವರೇ ಸರ್ಕಾರವವನ್ನು ಬೀಳಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಹೇಳುವ ಮೂಲಕ ಅಚ್ಚರಿ ಹುಟ್ಟಿಸಿದ್ದಾರೆ.
ಇದನ್ನೂ ಓದಿ: ಪುಲ್ವಾಮಾ ರೀತಿ ದಾಳಿ ನಡೆಸಲು ಸಿದ್ಧನಾಗಿ ಬಂದಿದ್ದ ಉಗ್ರನ ಪತ್ತೆ
ಮಾಗಡಿಯಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಅವರು, ನಾವು ಮಾಗಡಿಯಲ್ಲಿ ಬಾಲಕೃಷ್ಣ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಟ್ಟುತ್ತೇವೆ. ವಿರೋಧಿಗಳು ಏನೇ ಹೇಳಿದರೂ ತಲೆ ಕೆಡಿಸಿಕೊಳ್ಳುವುದಿಲ್ಲ. ಪಕ್ಷವನ್ನು ಸದೃಢವಾಗಿ ಬೆಳೆಸುತ್ತೇವೆ ಎಂದಿದ್ದಾರೆ.
ಕಾಂಗ್ರೆಸ್ ಕಾರ್ಯಕ್ರಮವನ್ನು ಯಾರಿಂದಲೂ ಅಳಿಸಲು ಸಾಧ್ಯವಿಲ್ಲ. ನರೇಂದ್ರ ಮೋದಿಯವರಿಂದಲೂ ಕಾಂಗ್ರೆಸ್ಗೆ ಏನೂ ಮಾಡಲಾಗದು. 20 ಲಕ್ಷ ಕೋಟಿ ರೂ.ಕರೊನಾ ಪ್ಯಾಕೇಜ್ ಹೆಸರಲ್ಲಿ ಜನರಿಗೆ ಪಂಗನಾಮ ಹಾಕುತ್ತಿದ್ದಾರೆ ಎಂದು ಆರೋಪಿಸಿದರು. (ದಿಗ್ವಿಜಯ ನ್ಯೂಸ್)
ಇದನ್ನೂ ಓದಿ: ನಿರ್ಬಂಧದ ಹೊರತಾಗಿಯೂ ಚೀನಾದಲ್ಲಿ ಕಾಡುಪ್ರಾಣಿಗಳ ಮಾಂಸ ಮಾರಾಟ ಆರಂಭ