ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆಗೆ ಸ್ಯಾಂಡಲ್ವುಡ್ ನಟ ಶಿವರಾಜ್ಕುಮಾರ್ ಇಂದು ಭೇಟಿ ನೀಡಿ ಮಾತುಕತೆ ನಡೆಸಿದ್ದು, ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬುದಕ್ಕೆ ಮತ್ತಷ್ಟು ಇಂಬು ನೀಡಿದೆ.
ಮಾ.12ರಂದು ಡಿಕೆಶಿ ಮನೆಗೆ ಬೇಟಿ ನೀಡಿದ್ದ ಜೆಡಿಎಸ್ನ ಮಾಜಿ ಶಾಸಕ ಮಧುಬಂಗಾರಪ್ಪ, ನಾನು ಮಾತ್ರವಲ್ಲ ನನ್ನ ಅಕ್ಕ ನನ್ನ ಅಕ್ಕ ಗೀತಾ ಶಿವರಾಜ್ಕುಮಾರ್ ಕೂಡ ಕಾಂಗ್ರೆಸ್ಗೆ ಬರಲಿದ್ದಾರೆ. ಮಾತುಕತೆ ಆಗಿದೆ. ಬಂದಿದ್ದಾರೆ ಅಂದುಕೊಳ್ಳಿ. ಡಿಕೆಶಿ ಅಧ್ಯಕ್ಷತೆಯಲ್ಲಿ ಕೆಲಸ ಮಾಡೋ ಅವಕಾಶ ಸಿಕ್ಕಿದೆ ಎಂದಿದ್ದರು. ಇಂದು ನಟ ಶಿವರಾಜ್ ಕುಮಾರ್ ಅವರೇ ಖುದ್ದು ಡಿಕೆಶಿ ಮನೆಗೆ ಭೇಟಿ ನೀಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಶಿವರಾಜ್ ಕುಮಾರ್ ಕುಟುಂಬ ಮತ್ತು ನಮ್ಮ ಕುಟುಂಬದ ನಡುವೆ ಆತ್ಮೀಯತೆ ಇದೆ. ಅವರು ಏನಕ್ಕೆ ಬಂದಿದ್ದರು? ಯಾವ ವಿಚಾರ ಮಾತಾಡಿದ್ವಿ ಅಂತಾ ಡಿಸ್ಕ್ಲೋಸ್ ಮಾಡಲ್ಲ. ಗೀತಾ ಶಿವರಾಜ್ಕುಮಾರ್ ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ನಾನು ಮಾತಾಡಲ್ಲ. ಮಧುಬಂಗಾರಪ್ಪ ಮಾತಾಡಬಹುದು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರ್ತಾರಾ? ಎಂಬುದರ ಬಗ್ಗೆ ನೀವೆ ಕಾದು ನೋಡಿ ಎಂದರು.
ಕದ್ದ ಕಾರಿನಲ್ಲಿದ್ದ ವಸ್ತು ನೋಡಿ ಬೆಚ್ಚಿದ ಖದೀಮರು, ಕಾರಿನಲ್ಲೇ ಚಿನ್ನಾಭರಣ ಬಿಟ್ಟು ಎಸ್ಕೇಪ್!
ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು
ರಸ್ತೆಬದಿಯ ತಂಗುದಾಣದಲ್ಲಿ ಹಾಡಹಗಲೇ ವೃದ್ಧೆ ಮೇಲೆ ಅತ್ಯಾಚಾರ! ಪೈಶಾಚಿಕ ಕೃತ್ಯಕ್ಕೆ ಬೆಚ್ಚಿದ ಸ್ಥಳೀಯರು