More

    ಬಿಜೆಪಿಗೆ ಚುನಾವಣೆ ಎದುರಿಸುವ ತಾಕತ್ತಿಲ್ಲ: ಡಿ.ಕೆ.ಶಿವಕುಮಾರ್

    ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರದ ಗದ್ದುಗೆ ಏರಬೇಕೆಂಬ ಹಂಬಲದಲ್ಲಿರುವ ಕಾಂಗ್ರೆಸ್​​ ಬಿಜೆಪಿ ವಿರುದ್ದ ತನ್ನ ದಾಳಿಯನ್ನು ಮುಂದುವರೆಸಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸರಣಿ ಟ್ವೀಟ್​ಗಳನ್ನು ಮಾಡಿದ್ಧಾರೆ.

    ಗ್ಯಾಸ್​ ಬೆಲೆ ಹೆಚ್ಚಳ ಹಾಗೂ ಬೋಗಸ್​ ಮತದಾರರ ಸೇರ್ಪಡೆ ಕುರಿತು ಟ್ವೀಟ್​ ಮಾಡಿರುವ ಅವರು ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ಧಾರೆ.

    ಗ್ಯಾಸ್​ ಸಿಲಿಂಡರ್​ಗೆ ನಮಸ್ಕರಿಸಿ

    ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವು ದಿನಗಳೇ ಬಾಕಿ ಉಳಿದಿವೆ. ಈ ಬಾರಿ ಮತದಾನ ಮಾಡುವ ಮುನ್ನ ನಿಮ್ಮ ಮನೆಯ ಎಲ್ಪಿಜಿ ಸಿಲಿಂಡರ್‌ಗೆ ನಮಸ್ಕರಿಸಿ ಯಾರಿಗೆ ಮತ ನೀಡಬೇಕೆಂದು ನಿರ್ಧರಿಸಿ. ಇದು ರಾಜ್ಯದ ಜನತೆಗೆ ನನ್ನ ವಿನಮ್ರ ಮನವಿ ಎಂದು ಹೇಳಿದ್ದಾರೆ.

    DK Shivakumar

    ಇದನ್ನೂ ಓದಿ: ಬಿಜೆಪಿಯಲ್ಲಿ ಇರುವವರು ಕಾಳಸಂತೆಕೋರರು, ಬೆಟ್ಟಿಂಗ್​ ದಂಧೆಕೋರರು: ಎಚ್​.ಡಿ.ಕುಮಾರಸ್ವಾಮಿ ಆರೋಪ

    ಚುನಾವಣೆ ಎದುರಿಸುವ ತಾಕತ್ತಿಲ್ಲ

    ಅನ್ಯಾಯ, ಅಡ್ಡದಾರಿಗಳಲ್ಲೇ ನಡೆಯುತ್ತಿರುವ ಬಿಜೆಪಿ ನೈತಿಕವಾಗಿ ಚುನಾವಣೆ ಎದುರಿಸುವ ತಾಕತ್ತಿಲ್ಲದೆ ಬೆಂಗಳೂರಿನಲ್ಲಿ 1 ಲಕ್ಷಕ್ಕೂ ಹೆಚ್ಚು ಬೋಗಸ್​​ ಮತದಾರರನ್ನು ವೋಟರ್‌ ಲಿಸ್ಟ್‌ನಲ್ಲಿ ಸೇರಿಸಿದೆ.

    ಒಂದೇ ಕುಟುಂಬದ ಮತದಾರರು 2ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಟ್ವೀಟ್​ ಮಾಡುವ ಮೂಲಕ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts