More

    ರಾಜ್ಯ ವಿಧಾನಸಭೆ ಚುನಾವಣೆ; ಕಷ್ಟದ ದಿನಗಳನ್ನು ನೆನೆದು ಡಿಕೆಶಿ ಭಾವುಕ

    ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಪ್ರಚಂಡ ದಿಗ್ವಿಜಯ ಸಾಧಿಸಿದ್ದು ನಾಯಕರು ಹಾಗೂ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲುಮುಟ್ಟಿದೆ.

    ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ರಾಜ್ಯದ ಜನತೆಗೆ ಧನ್ಯವಾದಗಳನ್ನು ತಿಳಿಸಿದ್ದು ಮಾತನಾಡುವ ವೇಳೆ ಭಾವುಕರಾಗಿದ್ದಾರೆ.

    ಕಷ್ಟದ ದಿನಗಳನ್ನು ನೆನೆದು ಭಾವುಕ

    ಇನ್ನು ಈ ಕುರಿತು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್​ ಕಾಂಗ್ರೆಸ್​ ಪಕ್ಷದ ಮೇಲೆ ನಂಬಿಕೆ ಇಟ್ಟು ಮತದಾನ ಮಾಡಿದ ಕರ್ನಾಟಕದ ಜನತೆಗೆ ನನ್ನ ಸಾಷ್ಟಾಂಗ ನಮಸ್ಕಾರಗಳು.

    DKS

    ಮಾತನಾಡುವ ವೇಳೆ ತಾವು ಜೈಲಿಗೆ ಹೋದ ದಿನಗಳನ್ನು ನೆನೆದು ಭಾವುಕರಾದ ಡಿಕೆಶಿ ಪಕ್ಷದ ನಾಯಕರು ತಮ್ಮ ಬೆಂಬಲಕ್ಕೆ ನಿಂತಿದ್ದನ್ನು ಸ್ಮರಿಸಿದರು.

    ಇದನ್ನೂ ಓದಿ: ಆರು ಬಾರಿ ಗೆದ್ದು ಬೀಗಿದ್ದ ಕಾಗೇರಿಗೆ ಸೋಲುಣಿಸಿದ ಕಾಂಗ್ರೆಸ್​​ ಅಭ್ಯರ್ಥಿ ಭೀಮಣ್ಣ ನಾಯ್ಕ

    ಬೆಂಬಲ ನೆನೆದು ಕಣ್ಣೀರು

    ಇದೇ ವೇಳೆ ಸೋನಿಯಾ ಗಾಂಧಿ, ರಾಹುಲ್​ ಗಾಂಧಿ, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್​ ಪಕ್ಷದ ರಾಷ್ಟ್ರೀಯ ನಾಯಕರು ತಾವು ಜೈಲಿಗೆ ಹೋದ ಸಂದರ್ಭದಲ್ಲಿ ನೀಡಿದ ಬೆಂಬಲವನ್ನು ಸ್ಮರಿಸಿದ್ದಾರೆ.

    ಇನ್ನು ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿ ಆರ್​. ಅಶೋಕ್​ ವಿರುದ್ಧ 1 ಲಕ್ಷಗಳ ಅಂತರದಲ್ಲಿ ಭರ್ಜರಿ ಜಯಸಾಧಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ತಾವು ರಾಮನಗರಕ್ಕೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts