ಮುಂಬೈ: ಮಹಾರಾಷ್ಟ್ರದ ಮೈತ್ರಿ ಸರ್ಕಾರದ ಭವಿಷ್ಯ ವಿರೋಧ ಪಕ್ಷದ ಕೈಯಲ್ಲಿಲ್ಲ ಎಂದು ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಸಂಸದ ಸಂಜಯ್ ರಾವುತ್ ಶಿವಸೇನಾ ಮುಖವಾಣಿ ಸಾಮ್ನಾಗಾಗಿ ನಡೆಸಿದ ಸಂದರ್ಶನದಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದಾರೆ. ತಾಕತ್ತಿದ್ದರೆ ಸರ್ಕಾರವನ್ನು ಉರುಳಿಸಲಿ ಎಂದು ಸವಾಲು ಹಾಕಿದ್ದಾರೆ.
ಸರ್ಕಾರ ಮೂರು ಗಾಲಿಯ ಗಾಡಿಯಿದ್ದಂತೆ ಎಂಬ ವಿಪಕ್ಷದ ಆರೋಪಕ್ಕೆ ತೀಕ್ಷ್ಣ ಉತ್ತರ ನೀಡಿರುವ ಉದ್ಧವ್, ಒಂದು ವೇಳೆ ಬುಲೆಟ್ ಟ್ರೈನ್ ಹಾಗೂ ತ್ರಿಚಕ್ರ ವಾಹನದ ಆಯ್ಕೆ ನೀಡಿದಲ್ಲಿ ನಾನು ಬಡವರು ಬಳಸುವ ತ್ರಿಚಕ್ರ ವಾಹನವನ್ನೇ ಆಯ್ದುಕೊಳ್ಳುತ್ತೇನೆ ಎಂದಿದ್ದಾರೆ. ಜತೆಗೆ ಬುಲೆಟ್ ಟ್ರೇನ್ ಯೋಜನೆ ಬೇಡ ಎಂದಿದ್ದಕ್ಕೂ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ; ಕರೊನಾ ಲಸಿಕೆ ಸಂಶೋಧನೆಯಲ್ಲಿ ಮುಂಚೂಣಿಯಲ್ಲಿದ್ದ ಕಂಪನಿಗೆ ಇದೆಂಥ ಹಿನ್ನಡೆ?
ಶಿವಸೇನೆ, ಎನ್ಸಿಪಿ ಹಾಗೂ ಕಾಂಗ್ರೆಸ್ನ ಮೈತ್ರಿ ಸರ್ಕಾರ ಬಡವರನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದ್ದಾರೆ. ಸರ್ಕಾರ ಸುಭದ್ರವಾಗಿದ್ದು, ನಾನು ಚಾಲಕನಾಗಿದ್ದರೆ, ಇನ್ನಿಬ್ಬರು ಜತೆಗಿದ್ದಾರೆ. ಸರ್ಕಾರದ ವಿಷಯಗಳಲ್ಲಿ ಶರದ್ ಪವಾರ್ ಸಲಹೆ ಪಡೆಯುತ್ತೇನೆ. ಆಗಾಗ ಸೋನಿಯಾ ಗಾಂಧಿ ಜತೆಗೂ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
ನಾನು ಈ ಹಿಂದೆ ಕೇಂದ್ರದ ಎನ್ಡಿಎ ಸರ್ಕಾರದ ಸಭೆಗಳಲ್ಲಿ ಭಾಗವಹಿಸುತ್ತಿದೆ. ಅಲ್ಲಿ 30-35 ಪ್ರಾದೇಶಿಕ ಪಕ್ಷಗಳ ನಾಯಕರಿರುತ್ತಿದ್ದರು. ಹಾಗಾದರೆ ಕೇಂದ್ರ ಸರ್ಕಾರವನ್ನು ಟ್ರೇನ್ ಸರ್ಕಾರ ಎಂದು ಕರೆಯಬೇಕೆ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ; ಧರ್ಮ ಮುಚ್ಚಿಟ್ಟು ಪ್ರೀತಿ ನಾಟಕ; ಲವ್ ಜಿಹಾದ್ಗೆ ಮಹಿಳೆ- ಮಗಳು ಬಲಿ; ಇಬ್ಬರನ್ನೂ ಕೊಂದು ಮನೆಯಲ್ಲಿ ಹೂತು ಹಾಕಿದ ಪಾಪಿ
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕೆಳಗಿಳಿಸಲು ಬಿಜೆಪಿ ಯತ್ನ ನಡೆಸಿದೆ. ಆದರೆ, ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲಕ್ಕೆ ಯಾವುದೇ ಯಶಸ್ಸು ದೊರೆಯುವುದಿಲ್ಲ ಎಂದು ಹೇಳಿದರು.
ಮಕ್ಕಳು ಬೇಡ, ಪೊಲೀಸರೇ ಅಂತ್ಯಕ್ರಿಯೆ ನೆರವೇರಿಸಲಿ; ಡೆತ್ನೋಟ್ ಬರೆದಿಟ್ಟು ಪಯಣ ಮುಗಿಸಿದ ದಂಪತಿ