More

    ಗಾಂಧಿ ಕನಸು ಸಾಕಾರಗೊಳಿಸಲು ಈ ಕೆಲಸ ಮಾಡಿ: ಸಿಎಂ ಸೇರಿ ಎಲ್ಲಾ ಸಚಿವ-ಶಾಸಕರಿಗೆ ಎಂಟಿಬಿ ನಾಗರಾಜು ಪತ್ರ

    ಬೆಂಗಳೂರು: ಖಾದಿ ಸಂಘ-ಸಂಸ್ಥೆಗಳನ್ನು ಪುನಶ್ಚೇತನಗೊಳಿಸಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕನಸನ್ನು ಸಾಕಾರಗೊಳಿಸಲು ಅಕ್ಟೋಬರ್ 2 ರಂದು ತಮ್ಮ ವ್ಯಾಪ್ತಿಯಲ್ಲಿ ಬರುವ ಖಾದಿ ಭಂಡಾರಗಳಿಗೆ ಭೇಟಿ ನೀಡಿ ಖಾದಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಖಾದಿ ಸಂಘ-ಸಂಸ್ಥೆಗಳಿಗೆ ಉತ್ತೇಜನ ನೀಡುವಂತೆ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎನ್.ನಾಗರಾಜು ಎಂಟಿಬಿ ಮನವಿ ಮಾಡಿದ್ದಾರೆ.

    ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಮಂಡಲದ ಉಭಯ ಸದನಗಳ ಪ್ರತಿಪಕ್ಷದ ನಾಯಕರು, ಸದಸ್ಯರು, ಉಪಸಭಾಧ್ಯಕ್ಷರು, ಉಪಸಭಾಪತಿ ಹಾಗೂ ತಮ್ಮ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ನಾಗರಾಜು ಪತ್ರ ಬರೆದಿದ್ದಾರೆ.

    ಇದನ್ನೂ ಓದಿ: ಸೆ.27ರಿಂದ 4 ದಿನ ಕೇತಿಗಾನಹಳ್ಳಿ ತೋಟದಲ್ಲಿ ಜೆಡಿಎಸ್ ಬಲವರ್ಧನೆಗೆ ಕಾರ್ಯಾಗಾರ

    ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯ ಮತ್ತು ಸ್ವಾವಲಂಬಿ ಗ್ರಾಮ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯನ್ನು ಸ್ಥಾಪಿಸಲಾಗಿದೆಯಾದರೂ ಅವು ಲಾಭದಾಯಕವಾಗಿಲ್ಲ. ರಾಜ್ಯದಲ್ಲಿ ಖಾದಿ ಉತ್ಪನ್ನಗಳನ್ನು ಉತ್ಪಾದಿಸುವ ಸುಮಾರು 200 ಸಂಸ್ಥೆಗಳಿದ್ದು, ಇವುಗಳಲ್ಲಿ ಸುಮಾರು 20 ಸಾವಿರ ನೂಲುವವರು ಮತ್ತು ನೇಕಾರರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆದರೆ, ಕರೊನಾದಿಂದಾಗಿ ಖಾದಿ ಸಂಘ-ಸಂಸ್ಥೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಹಾಗಾಗಿ, ಅಕ್ಟೋಬರ್ 2ರ ಗಾಂಧಿ ಜಯಂತಿಯ ಸುಸಂದರ್ಭದಲ್ಲಿ ಖಾದಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಅವುಗಳ ನೆರವಿಗೆ ಎಲ್ಲ ಜನಪ್ರತಿನಿಧಿಗಳು ಬರಬೇಕಿದೆ ಎಂದು ಸಚಿವ ಎಂಟಿಬಿ ಪತ್ರದಲ್ಲಿ ಮನವಿ ಮಾಡಿದ್ದಾರೆ.

    ಶಾಲೆ-ಕಾಲೇಜು, ಚಿತ್ರಮಂದಿರಗಳಲ್ಲಿ 100% ಭರ್ತಿ ಅವಕಾಶ; ಗಾಂಧಿ ಜಯಂತಿ ನಂತರ ಪಬ್​ ಓಪನ್​! ಯಾವಾಗ? ಏನೇನು?

    ನಾಯಿ ವಿಷಯಕ್ಕೆ ಜಗಳ… ಸಂಧಾನಕ್ಕೆ ಕರೆದ ರಾತ್ರಿ ನಡೆದೇ ಹೋಯ್ತು ದುರಂತ

    ಐತಿಹಾಸಿಕ ಅವಕಾಶ: ಮೊದಲ ಬಾರಿಗೆ ಯುವತಿಯರಿಂದ ಎನ್​ಡಿಎ ಪರೀಕ್ಷೆಗೆ ಅರ್ಜಿ ಆಹ್ವಾನ

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts