ನೆಲಮಂಗಲ: ಸಂಬಂಧಪಟ್ಟವರೊಬ್ಬರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆಂದು ಅವರನ್ನು ನೋಡಲು ಬಂದ ಯುವಕರ ಮೇಲೆ ಡಾಕ್ಟರ್ ಮತ್ತು ವೈದ್ಯಕೀಯ ಸಿಬ್ಬಂದಿ ಸೇರಿಕೊಂಡು ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕೇರ್ ಏಷ್ಯಾ ಆಸ್ಪತ್ರೆಯಲ್ಲಿ ನಡೆದಿದೆ.
ಡಾಕ್ಟರ್ ಶ್ರೀನಿವಾಸ್ ಆರೋಪಿತ ವೈದ್ಯ. ಈತ ತ್ಯಾಮಗೊಂಡ್ಲು ಲೋಕೇಶ್ ಹಾಗೂ ಮಂಜುನಾಥ್ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಲ್ಲೆಯ ದೃಶ್ಯವನ್ನು ವಿಡಿಯೋ ಮಾಡಿಕೊಂಡ ಹಿನ್ನೆಲೆ ಅವರಿಬ್ಬರನ್ನು ರೂಮಿನೊಳಗೆ ಕೂಡಿ ಹಾಕಿ ಮೊಬೈಲ್ನ್ನು ಕಿತ್ತುಕೊಂಡು ವಿಡಿಯೋ ಡಿಲೀಟ್ ಮಾಡಿರುವುದಾಗಿಯೂ ಆರೋಪಿಸಲಾಗಿದೆ.
ಸ್ಥಳೀಯರು ತಮ್ಮ ಮೊಬೈಲ್ಗಳಲ್ಲಿ ವಿಡಿಯೋ ರೆಕಾರ್ಡ್ ಮಾಡಿಟ್ಟುಕೊಂಡಿದ್ದಾರೆ ಎನ್ನಲಾಗಿದೆ. ಅಂದ ಹಾಗೆ ಈ ಆಸ್ಪತ್ರೆಯನ್ನು ತಾಲೂಕು ಆಡಳಿತದ ಅನುಮತಿ ಇಲ್ಲದೆಯೇ ನಿರ್ಮಿಸಲಾಗಿದೆ ಎನ್ನುವುದು ತಿಳಿದುಬಂದಿದೆ. ಈ ರೀತಿಯ ಕೃತ್ಯ ನಡೆಸಿರುವ ಇವರು ವೈದ್ಯರೋ ಅಥವಾ ರೌಡಿಗಳೋ ಎಂದು ಸ್ಥಳೀಯರು ಆಕ್ರೋಶ ಹೊರಹಾಕುತ್ತಿದ್ದಾರೆ.
ಜಿಲ್ಲೆಯಲ್ಲಿ ಮದ್ಯ ಮಾರಾಟವಿಲ್ಲವೆಂದು ಬೇರೆ ಜಿಲ್ಲೆಯಿಂದ ತಂದು ಮಾರಲು ಪ್ರಯತ್ನ; ಮದ್ಯ ವಶ ಪಡಿಸಿಕೊಂಡ ಅಧಿಕಾರಿಗಳು
ಅತ್ತೆಯ ಕುಪ್ಪಸದಿಂದ ಅವಳದ್ದೇ ಕತ್ತು ಹಿಸುಕಿದ ಸೊಸೆ! ಪೊದೆಯಲ್ಲಿ ಅಡಗಿತ್ತು ಮಗ ಸೊಸೆಯ ರಹಸ್ಯ