More

    ಕರೊನಾ ವಾರಿಯರ್ಸ್​ ಮೇಲೆ ನಿಷ್ಕರುಣೆಯಿಂದ ಕಲ್ಲು ತೂರಾಟ ನಡೆಸಿದವರಿಗೆ ಸಿಎಂ ಯೋಗಿ ಆದಿತ್ಯನಾಥ ನೀಡಿದ ಎಚ್ಚರಿಕೆಯೇನು?

    ಮೊರಾದಾಬಾದ್​: ಕರೊನಾದಿಂದಾಗಿ ಮೃತಪಟ್ಟ ವ್ಯಕ್ತಿಯ ಜತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕರೆದೊಯ್ಯಲು ಬಂದ ವೈದ್ಯರು ಹಾಗೂ ಪೊಲೀಸರ ಮೇಲೆ ನೂರಾರು ಜನರಿದ್ದ ಗುಂಪು ಕಲ್ಲು ತೂರಾಟ ನಡೆಸಿ ಗಾಯಗೊಳಿಸಿದೆ. ಆಂಬುಲೆನ್ಸ್​ ಹಾಗೂ ಪೊಲೀಸ್​ ವಾಹನಗಳನ್ನು ಧ್ವಂಸಗೊಳಿಸಿದೆ.

    ಕರೊನಾ ಸೋಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಪಶ್ಚಿಮ ಉತ್ತರಪ್ರದೇಶದ ಪಟ್ಟಣವಾದ ಮೊರಾದಾಬಾದ್​ನ ಹೃದಯಭಾಗದಲ್ಲಿರುವ ನವಾಬ್​ಪುರ ಕಾಲನಿಯನ್ನು ಸೀಲ್​ಡೌನ್​ ಮಾಡಲಾಗಿದೆ. ಇಲ್ಲಿದ್ದ ವ್ಯಕ್ತಿಯೊಬ್ಬ ಕೋವಿಡ್​-19 ನಿಂದಾಗಿ ಮೃತಪಟ್ಟಿದ್ದ.

    ಮೃತಪಟ್ಟ ಕುಟುಂಬದೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ವ್ಯಕ್ತಿಗಳನ್ನು ಆಂಬುಲೆನ್ಸ್​ನಲ್ಲಿ ಕರೆತರಲು ವೈದ್ಯರ ತಂಡ ತೆರಳಿತ್ತು. ಜತೆಗೆ ಪೊಲೀಸ್​ ಸಿಬ್ಬಂದಿ ಕೂಡ ಇದ್ದರು. ಕುಟುಂಬದ ಸದಸ್ಯರು ಆಂಬುಲೆನ್ಸ್​ ಹತ್ತುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಸ್ಥಳೀಯರು ವೈದ್ಯರು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ಆರಂಭಿಸಿದ್ದಾರೆ. ಘಟನೆಯಲ್ಲಿ ವಾಹನಗಳು ಜಖಂಗೊಂಡಿವೆ. ಆಂಬುಲೆನ್ಸ್​ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ಹಿರಿಯ ಪೊಲೀಸ್​ ಅಧಿಕಾರಿ ಅಮಿತ್​ ಪಾಠಕ್​ ಹೇಳಿದ್ದಾರೆ.

    ಕರೊನಾ ವಾರಿಯರ್ಸ್​ ಮೇಲೆ ಹಲ್ಲೆ ನಡೆಸುವವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಯೋಗಿ ಆದಿತ್ಯನಾಥ ಎಚ್ಚರಿಕೆ ನೀಡಿದ್ದಾರೆ. ಇದಲ್ಲದೆ, ಸಾರ್ವಜನಿಕರ ಸ್ವತ್ತುಗಳಿಗೆ ಹಾನಿ ಮಾಡಿದವರಿಂದಲೇ ನಷ್ಟವನ್ನು ಭರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಮೊರಾದಾಬಾದ್​ವೊಂದರಲ್ಲೇ 19 ಕೋವಿಡ್​ ಪ್ರಕರಣಗಳು ವರದಿಯಾಗಿವೆ. ಹೀಗಾಗಿ ಸೋಂಕಿತರಿದ್ದ ಪ್ರದೇಶಗಳನ್ನು ಸೀಲ್​ಡೌನ್​ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. (ಏಜೆನ್ಸೀಸ್​)

    ಮಹಾಮಾರಿ ಕರೊನಾದಿಂದ ಕುಗ್ಗಿರುವ ಆರ್ಥಿಕತೆ ಮೇಲೆತ್ತಲು ಡೊನಾಲ್ಡ್​ ಟ್ರಂಪ್​ಗೆ ಸಲಹೆ ನೀಡಲಿದ್ದಾರೆ ಭಾರತೀಯರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts