More

    ಗ್ರಾಮೀಣಭಾಗದಲ್ಲಿ ವೈದ್ಯರ ಕೊರತೆ

    ತುಮಕೂರು: ಗ್ರಾಮೀಣ ಭಾಗದಲ್ಲಿ ಇಂದಿಗೂ ವೈದ್ಯರ ಕೊರತೆ ಇದೆ. ತಜ್ಞ ವೈದ್ಯರ ಸೇವೆಯಂತು ಮರೀಚಿಕೆ ಅನಿಸಿದೆ. ಈ ಪರಿಸ್ಥಿತಿ ಸುಧಾರಿಸಲು ವೈದ್ಯರಲ್ಲಿ ಸೇವಾ ಮನೋಭಾವ ಬರಬೇಕು ಎಂದು ಗೃಹ ಸಚಿವರು ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

    ನಗರದ ಹೊರವಲಯದ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ವಿಸ್ತರಿಸಿಕೊಂಡಿರುವ ನೂತನ ಸ್ಪೆಷಾಲಿಟಿ ವಿಭಾಗದಲ್ಲಿನ ಅತ್ಯಾಧುನಿಕ ತಂತ್ರಜ್ಞಾನದ ಹೊರರೋಗಿಗಳ ಘಟಕ, ನವಜಾತ ಶಿಶುಗಳ ಎನ್‌ಸಿಯು, ಪಿಐಸಿಯು, ಲೇಬರ್ ಕೊಠಡಿ, ಸೌಂದರ್ಯವರ್ಧಕ ಚಿಕಿತ್ಸಾ ವಿಭಾಗ ಮತ್ತು ಕೇಂದ್ರೀಯ ಸಂಶೋಧನಾ ಲ್ಯಾಬ್‌ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಸರ್ಕಾರ ಕೂಡ ಈ ನಿಟ್ಟಿನಲ್ಲಿ ಕಳೆದ 10-15 ವರ್ಷದಿಂದ ಜಿಲ್ಲಾ , ತಾಲ್ಲೂಕು ಆಸ್ಪತ್ರೆಗಲ್ಲಿನ ಪರಿಸ್ಥಿತಿ ಸುಧಾರಿಸಲು ಕ್ರಮವಹಿಸಿದೆ. ಇನ್ನೂ ಸಾಕಷ್ಟು ಸುಧಾರಣೆ ಆಗಬೇಕಿದೆ ಎಂದರು.

    ಎಲ್ಲ ಕ್ಷೇತ್ರದಂತೆ ವೈದ್ಯಕೀಯ ಕ್ಷೇತ್ರದಲ್ಲಿಯೂ ಪೈಪೂಟಿ ಇದ್ದು, ಗುಣಮಟ್ಟದ ಚಿಕಿತ್ಸೆ ನೀಡಲು ವೈದ್ಯ ಸಮೂಹ ಮುಂದಾಗಬೇಕು. ಈ ನಿಟ್ಟಿನಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಆಗುತ್ತಿರುವ ಸಂಶೋಧನೆಗಳತ್ತ ಗಮನಹರಿಸುವುದು ಇಂದಿನ ಅಗತ್ಯವಾಗಿದೆ. ಜನಸಾಮಾನ್ಯರಿಗೆ ಅತ್ಯಾಧುನಿಕ ಚಿಕಿತ್ಸೆಗಳು ಕೈಗೆಟುಕದಂತಾಗಿವೆ. ಹಾಗಾಗಿ, ಸಿದ್ದಾರ್ಥ ವೈದ್ಯಕೀಯ ಕಾಲೇಜು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಚಿಕಿತ್ಸೆ ದೊರೆಯಲಿ ಎಂಬ ಉದ್ದೇಶದಿಂದ ವೈದ್ಯಕೀಯ ಕ್ಷೇತ್ರದ ಆವಿಷ್ಕಾರಗಳನ್ನು ತುಮಕೂರಿನಂತಹ ಪ್ರದೇಶದಲ್ಲಿ ಪರಿಚಯಿಸುತ್ತಿದ್ದೇವೆ ಎಂದು ಜಿ.ಪರಮೇಶ್ವರ ತಿಳಿಸಿದರು.

    ಆಸ್ಪತ್ರೆಗಳಲ್ಲಿ ವೈದ್ಯ ಸಮೂಹ ಕಾಲಮಿತಿ, ಬದ್ದತೆ ಮತ್ತು ಶಿಸ್ತಿನಿಂದ ಕೆಲಸ ಮಾಡಿದಾಗ, ರೋಗಿಗಳ ಸಮಸ್ಯೆಗಲಿಗೆ ಶೀಘ್ರ ಪರಿಹಾರ ಸಿಗಲಿದೆ. ಇದರ ಜತೆಗೆ ವೈದ್ಯಕೀಯ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಉನ್ನತ ಅಧ್ಯಯನಕ್ಕೆ ಸಹಕಾರಿಯಾಗಲಿದೆ. ಆರೋಗ್ಯ ಕ್ಷೇತ್ರದಲ್ಲಿ ವಿಶೇಷ ಪ್ರಕರಣ ಅಧ್ಯಯನ ಕುರಿತು ಲೇಖನ, ಸಂವಾದ ಮಾಡುವುದರ ಮೂಲಕ ಇನ್ನುಷ್ಟು ಪ್ರಗತಿಯನ್ನು ಆರೋಗ್ಯ ಕ್ಷೇತ್ರದಲ್ಲಿ ಸಾಧಿಸಲು ಸಾಧ್ಯ ಎಂದರು.

    ಬೆಂಗಳೂರಿಗೆ ಸರಿಸಮನಾಗಿ ಸೌಲಭ್ಯಗಳನ್ನು ಕಲಿಸುವುದು ಸವಾಲಿನ ಕೆಲಸ. ಆದರೆ, ಸಿದ್ದಾರ್ಥ ಆಸ್ಪತ್ರೆಯಲ್ಲಿ ಕ್ಯಾನ್ಸರ್, ಚರ್ಮರೋಗ, ನವಜಾತ ಶಿಶುಗಳ ವಿಭಾಗ, ಲೇಬರ್ ಹಾಗೂ ಸೌಂದರ್ಯವರ್ಧಕ ವಿಭಾಗದಲ್ಲಿ ಅತ್ಯಾಧುನಿಕ ಉಪಕರಣಗಳನ್ನೊಳಗೊಂಡ, ನುರಿತ ವೈದ್ಯರ ತಂಡ ಕಾರ್ಯೋನ್ಮುಖವಾಗಿದೆ. ಎಲ್ಲ ಕಾಯಿಲೆಗಳಿಗೂ ಒಂದೇ ಸೂರಿನಡಿಯಲ್ಲಿ ಚಿಕಿತ್ಸೆ ನೀಡಲು ಆಸ್ಪತ್ರೆ ಸಜ್ಜಾಗಿದೆ. ಇದು ಸಮಾಜಕ್ಕೆ ನೀಡುತ್ತಿರುವ ಕೊಡುಗೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಸಾಹೇ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ, ಸಾಹೇ ರಿಜಿಸ್ಟ್ರಾರ್ ಡಾ.ಎಂ.ಝಡ್ ಕುರಿಯನ್, ಸಾಹೇ ವಿವಿ ಪರೀಕ್ಷಾ ನಿಯಂತ್ರಣಕ ಡಾ.ಗುರುಶಂಕರ್, ವೈದ್ಯಕೀಯ ಅಧೀಕ್ಷಕ ಡಾ.ಎನ್.ಎಸ್.ವೆಂಕಟೇಶ್, ಸಾಹೇ ವಿವಿ ಕುಲಾಪತಿ ಸಲಹೆಗಾರ ಡಾ. ವಿವೇಕ್ ವೀರಯ್ಯ ವೈದ್ಯಕೀಯ ಕಾಲೇಜಿನ ಉಪಪ್ರಾಂಶುಪಾಲ ಡಾ.ಜಿ.ಎನ್. ಪ್ರಭಾಕರ್, ಸಿಇಒ ಕಿರಣ್ ಕುಮಾರ್, ಪ್ರಸೂತಿ ತಜ್ಞೆ ಡಾ.ಇಂದಿರಾ, ಚರ್ಮರೋಗ ತಜ್ಞ ಡಾ. ಶಿವಾನಂದ, ಡಾ. ಕಿರಣ್, ಡಾ. ಅರುಣ್, ಡಾ. ಪ್ರಸನ್ನಕುಮಾರ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts