‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’: ನಿರೀಕ್ಷೆಗೂ ಮೀರಿ ನಿಜವಾಯ್ತಾ ಕಾರ್ಣಿಕ?

ಬೆಂಗಳೂರು: ರಾಜ್ಯದಲ್ಲಿನ ವರ್ಷಂಪ್ರತಿಯ ಕಾರ್ಣಿಕವೊಂದು ನಿರೀಕ್ಷೆಗೂ ಮೀರಿ ನಿಜವಾಯಿತಾ? ಎಂಬ ಪ್ರಶ್ನೆ ಮೂಡುವಂತೆ ಜಾಗತಿಕ ವಿದ್ಯಮಾನವೊಂದು ನಡೆದಿದೆ. ಈ ಕುರಿತಂತೆ ಜನರಲ್ಲಿ ಈಗ ಸಣ್ಣ ಚರ್ಚೆಯೊಂದು ಹುಟ್ಟಿಕೊಂಡಿದ್ದು, ಭವಿಷ್ಯವಾಣಿಯ ಬಗ್ಗೆ ಮಾತುಕತೆಗಳು ನಡೆಯುತ್ತಿವೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಕಾರ್ಣಿಕೋತ್ಸವ ರಾಜ್ಯದಲ್ಲೇ ವಿಶೇಷ ಸ್ಥಾನ ಪಡೆದಿದೆ. ದೇವರಗುಡ್ಡದ ಕಾರ್ಣಿಕ ನುಡಿಯುವ ಗೊರವಪ್ಪ ನಾಗಪ್ಪ ಉರ್ಮಿ 20 ಅಡಿ ಬಿಲ್ಲನ್ನೇರಿ ಪ್ರತಿವರ್ಷವೂ ಕಾರ್ಣಿಕ (ಭವಿಷ್ಯ) ನುಡಿಯುತ್ತಾರೆ. ಅದು ಸತ್ಯವಾಗುತ್ತದೆ ಎಂದೇ ಜನರು ನಂಬಿದ್ದಾರೆ. ಮಾತ್ರವಲ್ಲ, ಇದು ಈ … Continue reading ‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’: ನಿರೀಕ್ಷೆಗೂ ಮೀರಿ ನಿಜವಾಯ್ತಾ ಕಾರ್ಣಿಕ?