ಮುಂಬೈ ದಾಳಿಯ ಸಂಚುಕೋರ ತಹವ್ವೂರ್ ರಾಣಾ ಭಾರತಕ್ಕೆ ಹಸ್ತಾಂತರ: ಟ್ರಂಪ್​ ಮಹತ್ವದ ಘೋಷಣೆ | Donald Trump

Donald Trump

Donald Trump : ಮುಂಬೈ ಮೇಲೆ 2028ರ ನವೆಂಬರ್​ 26ರಂದು ನಡೆದ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ (ಫೆ.13) ಘೋಷಿಸಿದರು.

ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಜತೆ ಶ್ವೇತಭವನದಲ್ಲಿ ದ್ವಿಪಕ್ಷೀಯ ಸಭೆ ನಡೆಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಟ್ರಂಪ್​ ಅವರು ಈ ಘೋಷಣೆ ಮಾಡಿದರು.

2008ರಲ್ಲಿ ನಡೆದ ಭೀಕರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ, ಸಂಚುಕೋರರಲ್ಲಿ ಒಬ್ಬನಾದ ಮತ್ತು ವಿಶ್ವದ ಅತ್ಯಂತ ದುಷ್ಟ ಜನರಲ್ಲಿ ಒಬ್ಬನನ್ನು (ತಹವ್ವೂರ್ ರಾಣಾ) ಭಾರತಕ್ಕೆ ಹಸ್ತಾಂತರಿಸಲು ನನ್ನ ಆಡಳಿತವು ಅನುಮೋದನೆ ನೀಡಿದೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಕಾನೂನು ಕ್ರಮವನ್ನು ಎದುರಿಸಲು ತಹವ್ವೂರ್ ರಾಣಾ ಭಾರತಕ್ಕೆ ಹಿಂತಿರುಗುತ್ತಿದ್ದಾನೆ ಎಂದು ಟ್ರಂಪ್ ಹೇಳಿದರು.

2008ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಶಿಕ್ಷೆಗೊಳಗಾಗಿ ಪ್ರಸ್ತುತ ಲಾಸ್ ಏಂಜಲೀಸ್ ಜೈಲಿನಲ್ಲಿ ಬಂಧಿಯಾಗಿರುವ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಒತ್ತಾಯಿಸುತ್ತಿತ್ತು. ಕೊನೆಗೂ ಭಾರತದ ಬೇಡಿಕೆಗೆ ಅಮೆರಿಕ ಒಪ್ಪಿದೆ. ಪಾಕಿಸ್ತಾನ ಮೂಲದ ಕೆನಡಾದ ಪ್ರಜೆಯಾಗಿರುವ ರಾಣಾ, ಮುಂಬೈ ದಾಳಿಯ ಪ್ರಮುಖ ಸಂಚುಕೋರ “ದೌದ್ ಗಿಲಾನಿ” ಎಂದೂ ಕರೆಯಲ್ಪಡುವ ಪಾಕಿಸ್ತಾನಿ-ಅಮೆರಿಕನ್ ಭಯೋತ್ಪಾದಕ ಡೇವಿಡ್ ಕೋಲ್ಮನ್ ಹೆಡ್ಲಿಯೊಂದಿಗೆ ನೇರ ಸಂಪರ್ಕ ಹೊಂದಿದ್ದಾನೆ. ಈ ದಾಳಿಯನ್ನು ನಡೆಸುವಲ್ಲಿ ಭಯೋತ್ಪಾದಕ ಗುಂಪು ಲಷ್ಕರ್-ಇ-ತೈಬಾ (LeT) ಗೆ ಬೆಂಬಲ ನೀಡುವಲ್ಲಿ ಹೆಡ್ಲಿ ಮತ್ತು ಪಾಕಿಸ್ತಾನದಲ್ಲಿರುವ ಇತರರಿಗೆ ಸಹಾಯ ಮಾಡಿದ ಆರೋಪ ರಾಣಾ ಮೇಲಿದೆ.

ಇದನ್ನೂ ಓದಿ: ವಿಪರೀತ ಬೆನ್ನು ನೋವು ಇದೆಯಾ? ಮಲಗುವಾಗ ನೀವಿದನ್ನು ಮಾಡಿದ್ರೆ ಸಾಕು ಉತ್ತಮ ಪರಿಹಾರ ಸಿಗುತ್ತೆ! Back Pain

ಪ್ರಪಂಚದಾದ್ಯಂತ ಮೂಲಭೂತವಾದಿ ಇಸ್ಲಾಮಿಕ್ ಭಯೋತ್ಪಾದನೆಯ ಬೆದರಿಕೆಯನ್ನು ಎದುರಿಸಲು ಭಾರತ ಮತ್ತು ಅಮೆರಿಕ ಹಿಂದೆಂದಿಗಿಂತಲೂ ಉತ್ತಮವಾಗಿ ಕಾರ್ಯನಿರ್ವಹಿಸಲಿವೆ ಎಂದು ಅಮೆರಿಕದ ಅಧ್ಯಕ್ಷರು ಶ್ವೇತಭವನದ ಜಂಟಿ ಸುದ್ದಿಗೋಷ್ಠಿ ವೇಳೆ ಹೇಳಿದರು.

ಭಾರತವು ಬೈಡೆನ್ ಆಡಳಿತದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿತ್ತು ಎಂದು ನಾನು ಭಾವಿಸುವುದಿಲ್ಲ. ಭಾರತ ಮತ್ತು ಬೈಡೆನ್ ಆಡಳಿತದ ನಡುವೆ ಹೆಚ್ಚು ಸೂಕ್ತವಲ್ಲದ ಬಹಳಷ್ಟು ವಿಷಯಗಳು ನಡೆದಿವೆ. ನಾವು ತುಂಬಾ ಹಿಂಸಾತ್ಮಕ ವ್ಯಕ್ತಿಯನ್ನು (ತಹವ್ವೂರ್ ರಾಣಾ) ತಕ್ಷಣವೇ ಭಾರತಕ್ಕೆ ಹಿಂತಿರುಗಿಸುತ್ತಿದ್ದೇವೆ. ಭಾರತಕ್ಕೆ ಒಳ್ಳೆಯದಾಗಿಸಲು ನಾವು ಬಯಸುತ್ತೇವೆ ಎಂದು ಟ್ರಂಪ್​ ಹೇಳಿದರು.

ಹಸ್ತಾಂತರಕ್ಕೆ ಅನುಮತಿ ನೀಡಿದ್ದಕ್ಕಾಗಿ ಪ್ರಧಾನಿ ಮೋದಿ ಟ್ರಂಪ್‌ಗೆ ಧನ್ಯವಾದ ಹೇಳಿದರು ಮತ್ತು ಭಯೋತ್ಪಾದನೆ ವಿರುದ್ಧ ಹೋರಾಡುವಲ್ಲಿ ಭಾರತದ ಸಹಕಾರದ ಭರವಸೆ ನೀಡಿದರು. (ಏಜೆನ್ಸೀಸ್​)

ಗಂಡನಿಗೆ ಕುಡಿತದ ಚಟ… ಸಾಲ ವಸೂಲಿಗೆ ಬರ್ತಿದ್ದ ಲೋನ್​ ರಿಕವರಿ ಏಜೆಂಟ್​ನನ್ನೇ ಮದ್ವೆಯಾದ ಪತ್ನಿ! Loan Recovery Agent

ಭ್ರಷ್ಟ ನೌಕರರಿಗೆ ಪ್ರಾಸಿಕ್ಯೂಷನ್ ಫಿಕ್ಸ್! 3 ತಿಂಗಳಲ್ಲಿ ತನಿಖೆಗೆ ಅನುಮತಿ ಕಡ್ಡಾಯ , ರಾಜ್ಯ ಸರ್ಕಾರದ ಮಹತ್ವದ ಆದೇಶ

Share This Article

ಆರ್ಥಿಕ ಸಮಸ್ಯೆಗಳಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಭಾನುವಾರ ಹೀಗೆ ಮಾಡಿ ನೋಡಿ…devotional

devotional:ಭಾನುವಾರ ಸೂರ್ಯ ದೇವನನ್ನು ಪೂಜೆ ಮಾಡುವುದರಿಂದ ಮತ್ತು ಸೂರ್ಯ ಮಂತ್ರಗಳನ್ನು ಪಠಿಸುವುದರಿಂದ ಜೀವನದಲ್ಲಿ ಸಂತೋಷ, ಸಮೃದ್ಧಿ…

ಸುಡು ಬೇಸಿಗೆಯಲ್ಲಿ ಆರೋಗ್ಯ ನಿಮ್ಮ ಕೈಯಲ್ಲಿ! ಈ ಟಿಪ್ಸ್​ ತಪ್ಪದೇ ಫಾಲೋ ಮಾಡಿ, ಇಲ್ಲದಿದ್ರೆ ಆರೋಗ್ಯಕ್ಕೆ ಡೇಂಜರ್​ | Summer Tips

Summer Tips : ಎಲ್ಲೆಡೆ ಬೇಸಿಗೆ ಆರಂಭವಾಗಿದೆ. ಸೂರ್ಯನ ಪ್ರಖರವಾದ ಕಿರಣಗಳು ನಮ್ಮ ನೆತ್ತಿಯನ್ನು ಸುಡುತ್ತಿದೆ.…

ಈ 3 ರಾಶಿಯವರು ಹಣಕ್ಕಿಂತಲೂ ಪ್ರೀತಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರಂತೆ! ನಿಮ್ಮ ರಾಶಿ ಯಾವುದು? Zodiac Signs

Zodiac Signs : ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…