More

    ಹೊಸ ವರ್ಷಾಚರಣೆ ವೇಳೆ ಸ್ವಚ್ಛತೆಗೆ ಧಕ್ಕೆ ಮಾಡಬೇಡಿ

    ಬೆಂಗಳೂರು: ಹೊಸ ವರ್ಷದ ಆಚರಣೆಯ ವೇಳೆ ನಗರದ ಸ್ವಚ್ಛತೆ ಮತ್ತು ಸೌಂದರ್ಯಕ್ಕೆ ಧಕ್ಕೆ ಬಾರದಂತೆ ಸಾರ್ವಜನಿಕರು ಜಾಗ್ರತೆ ವಹಿಸಬೇಕು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ತಿಳಿಸಿದ್ದಾರೆ.

    ವಿಶೇಷ ಆಚರಣೆ ಸ್ಥಳಗಳನ್ನು ಬಿಬಿಎಂಪಿ ಗುರುತಿಸಿ ಅಲ್ಲಿ ಕಸದ ಬಿನ್​ಗಳನ್ನು ಇಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಂಬುಲೆನ್ಸ್, ವೈದ್ಯರು, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಅಗ್ನಿ ಶಾಮಕ ಸೇವೆ ಕಲ್ಪಿಸಲಾಗಿದೆ. ಕೆಲವು ಸ್ಥಳಗಳಲ್ಲಿ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕಾಗಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಜತೆಗೆ ನಗರದ ವಿವಿಧೆಡೆ 1 ಸಾವಿರಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಬಿಬಿಎಂಪಿ ಪ್ರಹರಿ ಮತ್ತು ಬಿಎಂಟಿಸಿ ಸಾರಥಿ ವಾಹನ ರಾತ್ರಿ ಸಂಚರಿಸುತ್ತವೆ. ಜನಸಂದಣಿ ಹೆಚ್ಚಿರುವ ಕಡೆಗೆ ಬಸ್​ಗಳು ಚಲಿಸುತ್ತವೆ ಎಂದರು.

    ಸಾರ್ವಜನಿಕರ ಸುರಕ್ಷತೆಗೆ ಪುರುಷ ಮತ್ತು ಮಹಿಳಾ ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಆಚರಣೆ ವೇಳೆ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ ಮಾಡದೇ, ತಾತ್ಕಾಲಿಕ ಅಳವಡಿಸಲಾದ ಶೌಚಾಗೃಹಗಳನ್ನು ಬಳಸಬೇಕು. ಹೋಟೆಲ್, ಪಬ್, ರೆಸ್ಟೋರೆಂಟ್​ಗಳಲ್ಲಿ ಉತ್ಪತ್ತಿಯಾದ ತ್ಯಾಜ್ಯವನ್ನು ರಸ್ತೆಗಳ ಮೇಲೆ ಬಿಸಾಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು. ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರಿಗೆ ತುರ್ತು ಪರಿಸ್ಥಿತಿಯಲ್ಲಿ ಬಿಬಿಎಂಪಿ (080-22660000), ಪೊಲೀಸ್ (100) ಆಂಬುಲೆನ್ಸ್ (108) ನಿಯಂತ್ರಣ ಕೊಠಡಿಗಳಿಗೆ ಕರೆ ಮಾಡಬಹುದು ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts