More

    ಖಾಸಗಿ ಸಮಿತಿಗೆ ದಸರಾ ಅವಕಾಶ ನೀಡಬೇಡಿ

    ಸೊರಬ: ಶ್ರೀಕ್ಷೇತ್ರ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದಸರಾ ಉತ್ಸವ ಆಚರಿಸಲು ಖಾಸಗಿ ಸಮಿತಿಯವರಿಗೆ ಅವಕಾಶ ಒದಗಿಸಬಾರದು ಎಂದು ಆಗ್ರಹಿಸಿ ಶ್ರೀ ರೇಣುಕಾಂಬ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯಿಂದ ಶುಕ್ರವಾರ ತಹಸೀಲ್ದಾರ್ ಹುಸೇನ್ ಸರಕಾವಸ್ ಅವರಿಗೆ ಮನವಿ ಸಲ್ಲಿಸಲಾಯಿತು.

    ಸಮಿತಿ ಅಧ್ಯಕ್ಷ ಪ್ರಸನ್ನ ಶೇಟ್ ಮಾತನಾಡಿ, ಇತ್ತೀಚೆಗೆ ದಸರಾ ಉತ್ಸವ ಆಚರಣೆ ಕುರಿತು ಉಪವಿಭಾಗಾಧಿಕಾರಿಗಳ ನೇತೃತ್ವದ ಸಭೆಯಲ್ಲಿ ಶಾಂತಿಯುತವಾಗಿ ಗ್ರಾಪಂ, ಗ್ರಾಮಸ್ಥರು ಮತ್ತು ದೇವಸ್ಥಾನ ಸಮಿತಿಯವರು ಒಗ್ಗೂಡಿ ಆಚರಿಸಲು ತಿಳಿಸಲಾಗಿದೆ. ಆದರೆ, ದೇವಸ್ಥಾನದ ಕಲ್ಯಾಣ ಮಂದಿರ ಆವರಣದಲ್ಲಿ ಖಾಸಗಿಯಾಗಿ ಶ್ರೀ ರೇಣುಕಾಂಬ ದಸರಾ ಆಚರಣಾ ಸಮಿತಿಯವರು ವೇದಿಕೆ ನಿರ್ಮಿಸುತ್ತಿರುವುದಕ್ಕೆ ಗ್ರಾಮಸ್ಥರ ವಿರೋಧವಿದೆ ಎಂದರು.
    ದಸರಾ ಆಚರಣೆ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಖಾಸಗಿಯವರಿಗೆ ಅವಕಾಶ ನೀಡಿದರೆ ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಈ ಬಗ್ಗೆ ಗ್ರಾಮಸ್ಥರು ದೇವಸ್ಥಾನ ಸಮಿತಿಗೆ ಮನವಿ ಸಲ್ಲಿಸಿದ್ದಾರೆ. ಈ ಹಿಂದಿನ ಸಭೆಯಲ್ಲಿ ತಿಳಿಸಿದಂತೆ ಖಾಸಗಿಯವರಿಗೆ ಅವಕಾಶ ಒದಗಿಸಬಾರದು. ಗ್ರಾಮದಲ್ಲಿ ಅಶಾಂತಿ ನಿರ್ಮಾಣವಾದರೆ ಅಧಿಕಾರಿಗಳೇ ಹೊಣೆ ಆಗಬೇಕಾಗುತ್ತದೆ ಎಂದು ಎಚ್ಚರಿಸಿದರು.
    ಮನವಿ ಸಲ್ಲಿಕೆ ವೇಳೆ ದೇವಸ್ಥಾನ ಸಮಿತಿಯ ಸದಸ್ಯರಾದ ದೇವೇಂದ್ರಪ್ಪ, ಶಿವಶಂಕರಗೌಡ, ಪ್ರವೀಣ್ ಮಿರ್ಜಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts