ಅಮಾಯಕರ ಬಲಿ ಪಡೆದವರ ಬಿಡಬೇಡಿ

blank

ಮಸ್ಕಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಪಟ್ಟಣದಲ್ಲಿ ಮುಸ್ಲಿಂ ಪಂಚ್ ಕಮೀಟಿಯಿಂದ ಮೌನ ಮೆರವಣಿಗೆ ನಡೆಸಲಾಯಿತು.

blank
blank

ಜಾಮೀಯಾ ಮಸೀದಿ ಬಳಿ ಜಮಾಯಿಸಿದ ನೂರಾರು ಮುಸ್ಲಿಮರು ಮೋಂಬತ್ತಿ ಬೆಳಕಿನಲ್ಲಿ ಡಾ.ಖಲೀಲ್ ವೃತ್ತ, ಪುರಸಭೆ ಕ್ರಾಸ್, ಮುಖ್ಯರಸ್ತೆ ಮೂಲಕ ಹಳೇ ಬಸ್ ನಿಲ್ದಾಣ ಬಳಿಯ ಡಾ. ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿದರು.

ಈ ವೇಳೆ ಕಮೀಟಿ ಪ್ರಮುಖರಾದ ಅಬ್ದುಲ್ ಗನಿ, ಜಿಲಾನಿ ಖಾಜಿ, ಮಸೂದ್ ಪಾಷಾ ಮಾತನಾಡಿ, ಭಯೋತ್ಪಾದಕರು ಅಮಾಯಕ ಜನರ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಿರುವುದು ಖಂಡನೀಯ. ಪ್ರವಾಸಿಗರ ಬಲಿ ಪಡೆದ ಉಗ್ರರನ್ನು ಬಿಡಬಾರದು ಎಂದು ಆಗ್ರಹಿಸಿದರು. ಬಳಿಕ ಮೃತರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು.

ಕಮೀಟಿ ಅಧ್ಯಕ್ಷ ಅಬ್ದುಲ್ ಅಜೀಜ್, ಪುರಸಭೆ ಸದಸ್ಯ ಶಬ್ಬೀರ್ ಚೌದ್ರಿ, ಮುಖಂಡರಾದ ಅಜ್ಮೀರ್ ಹಲಪುಡಿ, ಅಜ್ಜು ಮೆಕಾನಿಕ್, ಚಾಂದ್ ಸೇಡ್ಮೀ, ರಾಜಾ ನದಾಫ್, ಹುಸೇನ್, ಖಲೀಲ್ ಸೇಡ್ಮೀ, ರಿಯಾಜ್ ಖಾಜಿ, ಖದೀರ್ ಚೌದ್ರಿ, ರಜಾಕ್, ನೂರ್ ಮೌಲಾನಾ, ಆದಂ ಹಾಜಿ, ನಬೀಸಾಬ್ ಬಿದರಕೋಟ, ಶಫಿ ಶೇರು, ಖಾಜಾ ಶಿಕಾರಿ, ನಿಸಾರ್ ಅಹ್ಮದ್ ಇತರರಿದ್ದರು.

Share This Article

ಬೆಳಿಗ್ಗೆ ಎದ್ದ ತಕ್ಷಣ ಹೀಗೆ ಮಾಡಿ..ನಿಮ್ಮ ದೇಹದ ಕೊಬ್ಬು ತಕ್ಷಣ ಕಡಿಮೆಯಾಗುತ್ತದೆ! weight loss

weight loss: ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಸುತ್ತ ಇರುವ ಮೊಂಡುತನದ ಕೊಬ್ಬನ್ನು ಕಡಿಮೆ ಮಾಡುವುದು (ತೂಕ…

ಎಸಿ, ಫ್ಯಾನ್​ ಇದ್ದರೂ ಬೆವರುತ್ತಿದ್ದೀರಾ?; ತಂಪಿನ ಪ್ರದೇಶದಲ್ಲಿಯೂ ಇಷ್ಟೊಂದು ಹಿಟ್​ ಇರಲು ಕಾರಣವೇನು?: ಇಲ್ಲಿದೆ ಮಾಹಿತಿ | Sweating

Sweating: ಸಾಮಾನ್ಯವಾಗಿ ಬಹುತೇಕರು ಶಕೆಯಲ್ಲಿ ಬೆವರುವುದನ್ನು ಕಾಣುತ್ತೇವೆ. ಆದರೆ, ಇನ್ನು ಕೆಲ ಜನರು ತಾಪಮಾನ 35ಕ್ಕೂ…

ಕಾರಿನೊಳಗೆ ಮಕ್ಕಳನ್ನು ಆಡಲು ಬಿಡುತ್ತೀರಾ; ಇದು ಅವರ ಕೊನೆಯ ಆಟವಾಗಬಹುದು; ಪೋಷಕರು ಇದನ್ನು ತಿಳಿದಿರಲೇಬೇಕು| Car

Car| ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು…