More

    ಪರೀಕ್ಷೆ ಎದುರಿಸುವಾಗ ಬೇಡ ಒತ್ತಡ

    ನವಲಗುಂದ: ಪರೀಕ್ಷೆ ಕುರಿತು ನಿಮ್ಮ ಮನಸಿನಲ್ಲಿ ಮೂಡಿರುವ ಭಯ ಹೊರ ಹಾಕಿ. ಕೊನೇ ಗಳಿಗೆಯಲ್ಲಿ ಅನಗತ್ಯ ಒತ್ತಡಕ್ಕೆ ಒಳಗಾಗುವುದರ ಬದಲು ಧೈರ್ಯದಿಂದ ಇರಿ. ಓದಿದ್ದನ್ನು ಮನನ ಮಾಡಿಕೊಂಡು ಪರೀಕ್ಷೆಯಲ್ಲಿ ಉತ್ತಮವಾಗಿ ಬರೆದು ಸಾಧನೆ ಮಾಡಿ ಎಂದು ಶಾಸಕ ಎನ್.ಎಚ್. ಕೋನರಡ್ಡಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.


    ಮಂಗಳವಾರ ಪಟ್ಟಣದ ಶಿಕ್ಷಕರ ಸಹಕಾರ ಕಲ್ಯಾಣ ಕೇಂದ್ರದಲ್ಲಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಧಾರವಾಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ನವಲಗುಂದ, ನಂದೀಶ್ವರ ನೈಪುಣ್ಯ ಕೌಶಲ್ಯ ಸಂಸ್ಥೆ ( ರಿ ) ರಾಣೆಬೆನ್ನೂರು ಆಶ್ರಯದಲ್ಲಿ ಹಮ್ಮಿಕೊಂಡಿದ್ದ 2023-24ನೇ ಸಾಲಿನ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಮನೋಬಲ ಹೆಚ್ಚಿಸುವ ಹಾಗೂ ಪರೀಕ್ಷೆ ಭಯ ನಿವಾರಣೆಯ ವಿಶೇಷ ನೈಪುಣ್ಯ ಕೌಶಲ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


    ಕ್ಷೇತ್ರ ಶಿಕ್ಷಣಾಧಿಕಾರಿ ಶಿವಾನಂದ ಮಲ್ಲಾಡ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ.ಬಿ. ಕೊಪ್ಪದ, ರೇಣುಕಾ ಮುರನಾಳ, ಭಾಗೀರಥಿ ಮಳಲಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts