More

    ಮನೆ ಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್: ಸುಂದರೇಶ್

    ಶಿವಮೊಗ್ಗ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ನಾಯಕ ರಾಹುಲ್ ಗಾಂಧಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ 25 ಗ್ಯಾರಂಟಿ ಘೋಷಣೆ ಮಾಡಿದ್ದು, ಗ್ಯಾರಂಟಿಗಳ ಕರಪತ್ರಗಳನ್ನು ಶಿವಮೊಗ್ಗದಲ್ಲಿ ಮನೆ ಮನೆಗೆ ತಲುಪಿಸಲಾಗುವುದು ಎಂದು ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು.

    ಎಐಸಿಸಿ ಘೋಷಿಸಿರುವ ಗ್ಯಾರಂಟಿಗಳ ಜತೆಗೆ ರಾಜ್ಯ ಸರ್ಕಾರದ ಗ್ಯಾರಂಟಿಯಿಂದ ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಎಲ್ಲ ಸಾಧ್ಯತೆಗಳಿವೆ. ಶಿವಮೊಗ್ಗದಲ್ಲಿ ನಮ್ಮ ಅಭ್ಯರ್ಥಿ ಗೀತಾ ಗೆಲುವು ನಿಶ್ಚಿತ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಈಗಾಗಲೇ ರಾಜ್ಯ ಸರ್ಕಾರದ ಗ್ಯಾರಂಟಿಗಳು ಈಡೇರಿವೆ. ಜಿಲ್ಲೆಯಲ್ಲಿ 4.60 ಲಕ್ಷ ಮನೆಗಳಿಗೆ ಸರ್ಕಾರದ ವಿವಿಧ ಯೋಜನೆಗಳು ತಲುಪಿವೆ. ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸಹಿ ಮಾಡಿರುವ ಗ್ಯಾರಂಟಿ ಪತ್ರಗಳನ್ನು ಜನರಿಗೆ ತಲುಪಿಸಲಾಗುವುದು ಎಂದರು.
    ರಾಜ್ಯದ ಗ್ಯಾರಂಟಿಗಳಿಂದ ಎಲ್ಲರಿಗೂ ಅನುಕೂಲವಾಗಿದೆ. ಮೋದಿ ಅಲೆ ಎಲ್ಲಿಯೂ ಇಲ್ಲ. ಬಿಜೆಪಿ ಹೇಳುವುದೆಲ್ಲವೂ ಸುಳ್ಳು. ಜನರ ಮೇಲೆ ಲಕ್ಷಾಂತರ ರೂ. ಸಾಲ ಹೊರಿಸಲಾಗಿದೆ. ಬಂಗಾರಪ್ಪರ ಕೆಲಸಗಳು, ಮಧು ಪ್ರಯತ್ನಗಳ ಮೂಲಕ ಗೀತಾ ಶಿವರಾಜ್‌ಕುಮಾರ್ ಗೆಲುವು ಖಚಿತ ಎಂದು ಹೇಳಿದರು.
    ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಪ್ರಮುಖರಾದ ಚಂದ್ರಭೂಪಾಲ್, ಕಲೀಂ ಪಾಶಾ, ರಮೇಶ್ ಶೆಟ್ಟಿ ಶಂಕರಘಟ್ಟ, ಎಸ್.ಟಿ.ಚಂದ್ರಶೇಖರ್, ಗಿರೀಶ್ ರಾವ್, ಇಕ್ಕೇರಿ ರಮೇಶ್, ಶಾಂತವೀರನಾಯ್ಕ, ಮಧು, ಚಂದನ್, ಶಿ.ಜು.ಪಾಶಾ, ಜಿ.ಪದ್ಮನಾಭ್ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts