ಹೆಬ್ರಿ: ತಮ್ಮ ಪತಿ, ಖಾಸಗಿ ಬಸ್ ಮಾಲೀಕ ಕನ್ಯಾನ ಬನಶಂಕರಿಯ ಶಿವಪ್ರಸಾದ್ ಪರಸ್ತ್ರಿ ಜತೆ ಸಂಬಂಧ ಹೊಂದಿದ್ದು, ಜತಗೆ ತನಗೆ ದೈಹಿಕ ಹಿಂಸೆ ನೀಡುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಹೆಬ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ವರದಕ್ಷಿಣೆ ಕಿರುಕುಳದಡಿ ಪ್ರಕರಣ ದಾಖಲಾಗಿದೆ. ಮಂಜುಳಾ ಎಂಬುವರು ದೂರು ನೀಡಿದ್ದು, ಆರೋಪಿ ಶಿವಪ್ರಸಾದ್ ಹಲವು ವರ್ಷಗಳಿಂದ ಹೆಬ್ರಿಯಲ್ಲಿ ಖಾಸಗಿ ಬಸ್ ಚಾಲಕ ಮತ್ತು ನಿರ್ವಾಹಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಸ್ವತಃ ಒಂದು ಬಸ್ ಮಾಲೀಕನಾಗಿದ್ದಾನೆ. ತನ್ನ ವಿವಾಹದ ಸಂದರ್ಭ ಮನೆಯವರು ನೀಡಿದ ಚಿನ್ನಾಭರಣಗಳನ್ನು ಅಡವಿರಿಸಿದ್ದು, ಬಸ್ ಲೀಸ್ ಪಡೆಯಲು ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದಾರೆ. ಜತೆಗೆ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು, ತನ್ನ ಹಾಗೂ ಮಕ್ಕಳ ಪಾಲನೆಗೆ ಹಣ ನೀಡದಿರುವುದರ ಜತೆಗೆ ಹಿಂಸೆಯನ್ನೂ ನೀಡುತ್ತಿದ್ದಾರೆ. ಜತೆಗೆ ಜೀವ ಬೆದರಿಕೆಯನ್ನೂ ಒಡ್ಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಬಸ್ ಮಾಲೀಕನ ವಿರುದ್ಧ ವರದಕ್ಷಿಣೆ ಕೇಸ್

You Might Also Like
ನಿಮ್ಮ ಕನಸಿನಲ್ಲಿ ಗಿಳಿ, ಗೂಬೆ, ನವಿಲು ಕಾಣಿಸಿಕೊಂಡಿದ್ಯಾ? ಈ ಪಕ್ಷಿಗಳಿಂದ ಬರಲಿದ್ಯಾ ಅದೃಷ್ಟ.. dreams
dreams: ಆಧ್ಯಾತ್ಮಿಕ ನಂಬಿಕೆಗಳ ಪ್ರಕಾರ, ಕನಸುಗಳು ಬಹಳ ಮುಖ್ಯ. ಕನಸಿನಲ್ಲಿ ಗಿಳಿ, ಗೂಬೆ, ನವಿಲು ಮುಂತಾದ…
ಪ್ರತಿದಿನ ಊಟಕ್ಕೆ ಗರಿಗರಿ ಹಪ್ಪಳ ಬೇಕಾ? ಹಾಗಿದ್ರೆ ಆರೋಗ್ಯ ಬಗ್ಗೆ ಇರಲಿ ಎಚ್ಚರ..papad
papad: ಹಪ್ಪಳಗಳನ್ನು ಊಟದಲ್ಲಿ ರುಚಿ ಇರಲಿ ಎಂಬ ಕಾರಣಕ್ಕೆ ಬಳಸುತ್ತಾರೆ. ಹಾಗಾಗಿ ಊಟಕ್ಕೆ ರುಚಿ ಇದೆ…
ಬೇಸಿಗೆಯಲ್ಲಿ ಈ 5 ಪದಾರ್ಥಗಳೊಂದಿಗೆ ಅಪ್ಪಿ ತಪ್ಪಿಯೂ ಮೊಸರು ತಿನ್ನಬೇಡಿ! | Yogurt
Yogurt : ಬೇಸಿಗೆಯಲ್ಲಿ, ಮೊಸರು ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಆದರೆ, ಮೊಸರಿನೊಂದಿಗೆ ಅಥವಾ ಅದರ…