ತುಮಕೂರು: ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಯುವತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ತೊಂಡೆಗೆರೆ ಬಳಿ ನಡೆದಿದೆ.
ಮೃತ ಯುವತಿ ಗೌರಮ್ಮ ಕೊರಟಗೆರೆ ತಾಲೂಕಿನ ಎಲೆರಾಂಪುರದವರು. ತೊಂಡೆಗೆರೆ ಗ್ರಾಮದ ಕುಮಾರ್ ಎಂಬುವರ ಜತೆಗೆ ವಿವಾಹವಾಗಿತ್ತು. ವರದಕ್ಷಿಣೆಗಾಗಿ ಅವರನ್ನು ಪೀಡಿಸಲಾಗುತ್ತಿತ್ತು. ಆದರೆ ನಿನ್ನೆ ಮಧ್ಯಾಹ್ನ ಪಾಪಿಗಳು ಅವಳಿಗೆ ಬೆಂಕಿ ಇಟ್ಟು ಹತ್ಯೆ ಮಾಡಿದ್ದಾರೆ.
ಗೌರಮ್ಮನವರ ಮೃತದೇಹ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿದೆ. ಆಕೆ ಸಾಯುವುದಕ್ಕೂ ಮೊದಲು ಪೊಲೀಸರು ಹೇಳಿಕೆಯನ್ನು ಪಡೆದಿದ್ದು, ತನಿಖೆ ಪ್ರಾರಂಭಿಸಿದ್ದಾರೆ. (ದಿಗ್ವಿಜಯ ನ್ಯೂಸ್)