ಬೆಂಗಳೂರು: ಹಾವೇರಿಯಲ್ಲಿ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕವಿ, ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್ ತಿಳಿಸಿದ್ದಾರೆ.
ಫೆ.26ರಿಂದ 28ರವರೆಗೆ ಹಾವೇರಿಯಲ್ಲಿ ನುಡಿಜಾತ್ರೆ ನಡೆಯಲಿದ್ದು, ಈಗಾಗಲೇ ವೇದಿಕೆಗಳ ಸ್ಥಳ ನಿಗದಿ, ಗೋಷ್ಠಿಗಳ ಸ್ವರೂಪ ಮತ್ತು ವಿಷಯ ಆಯ್ಕೆಗೆ ಸಮಿತಿ ರಚನೆ ಸೇರಿದಂತೆ ಹಲವು ಪ್ರಕ್ರಿಯೆಗಳು ನಡೆದಿವೆ. ಇನ್ನು ಸಮ್ಮೇಳನದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಕಸಾಪ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಕಾರ್ಯಕಾರಿ ಸಮಿತಿಯ ಸಭೆ ನಡೆಯಿತು. ಇದನ್ನೂ ಓದಿರಿ ಶವಗಳ ಮೇಲೆಯೇ ಓಡಾಡಿದ ಜನ… ಬೆಚ್ಚಿಬೀಳಿಸುತ್ತೆ ಶಿವಮೊಗ್ಗದಲ್ಲಿನ ಸ್ಫೋಟದ ಭೀಕರತೆ
ಸಮ್ಮೇಳನಾಧ್ಯಕ್ಷರ ಆಯ್ಕೆಗೆ ಡಾ.ದೊಡ್ಡರಂಗೇಗೌಡ, ಗೊ.ರು.ಚನ್ನಬಸಪ್ಪ, ವೀಣಾ ಶಾಂತೇಶ್ವರ ಮತ್ತು ಕೆ.ಎಸ್. ಭಗವಾನ್ ಅವರ ಹೆಸರು ಪರಿಷತ್ತಿನ ಮುಂದೆ ಪ್ರಸ್ತಾಪ ಆಗಿತ್ತು. ಅಂತಿಮವಾಗಿ ಸಮ್ಮೇಳನಾಧ್ಯಕ್ಷರನ್ನಾಗಿ ಡಾ. ದೊಡ್ಡರಂಗೇಗೌಡ ಅವರನ್ನು ಬಹುತದಿಂದ ಆಯ್ಕೆ ಮಾಡಲಾಗಿದೆ.
100 ರೂ. ಮುಖಬೆಲೆಯ ಹಳೇ ನೋಟು ಇನ್ಮುಂದೆ ಚಲಾವಣೆ ಆಗಲ್ಲ! ಸೂಚನೆ ಕೊಟ್ಟ ಆರ್ಬಿಐ
ಈ ಐನಾತಿ ದಂಪತಿಗೆ ಮಿಡಲ್ ಕ್ಲಾಸ್ ಜನರೇ ಟಾರ್ಗೆಟ್! ನೂರಾರು ಜನರ ಕೆನ್ನೆಗೆ ಕಣ್ಣೀರಿಳಿಸಿದ ಕರ್ಮಿಷ್ಟರು
ಶವಗಳ ಮೇಲೆಯೇ ಓಡಾಡಿದ ಜನ… ಬೆಚ್ಚಿಬೀಳಿಸುತ್ತೆ ಶಿವಮೊಗ್ಗದಲ್ಲಿನ ಸ್ಫೋಟದ ಭೀಕರತೆ