More

    ‘ವೀರ ಕಂಬಳ’ ಸಿನಿಮಾಗೆ ಬಣ್ಣ ಹಚ್ಚಿದ ಡಾ. ವೀರೇಂದ್ರ ಹೆಗ್ಗಡೆ; ಫೋಟೊ ಫುಲ್​ ವೈರಲ್​..!

    ಧರ್ಮಸ್ಥಳ: ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದ ಧರ್ಮದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ವೀರ ಕಂಬಳ ಸಿನಿಮಾಗೆ ಬಣ್ಣ ಹಚ್ಚಿ ಹೊಸ ಸಂಚಲನವನ್ನೇ ಸೃಷ್ಟಿಸಿದ್ದಾರೆ,

    ಎಸ್.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದ್ದು ಈ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕಥೆ, ತುಳುನಾಡಿನ ಕಂಬಳ ಸ್ಪರ್ಧೆಯನ್ನು ಕೇಂದ್ರವಾಗಿಟ್ಟುಕೊಂಡಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಗಳಲ್ಲಿಯೂ ತೆರೆಗೆ ಬರಲಿದೆ.

    ಈ ಸಿನಿಮಾ ತುಳು ಭಾಷೆಯಲ್ಲಿ ‘ಬಿರ್ದ್‌ದ ಕಂಬಳ’ ಹೆಸರಿನಲ್ಲಿ ಮೂಡಿ ಬರುತ್ತಿದೆ. 7 ವರ್ಷಗಳ ಕಾಲ ಸಂಶೋಧನೆ ನಡೆಸಿ ಸಿನಿಮಾದ ಕಥೆ, ಚಿತ್ರಕಥೆಯನ್ನು ಹೆಣೆಯಲಾಗಿದೆಯಂತೆ. ಆಗೊಮ್ಮೆ ಈಗೊಮ್ಮೆ ಕನ್ನಡ ಸಿನಿಮಾಗಳಲ್ಲಿ ಸಣ್ಣದಾಗಿ ಕಂಬಳ ಕ್ರೀಡೆಯನ್ನು ತೋರಿಸಲಾಗುತ್ತಿತ್ತು. ಇತ್ತೀಚೆಗೆ ‘ಕಾಂತಾರ’ ಸಿನಿಮಾದಲ್ಲೂ ಕಂಬಳ ಕಾಣಿಕೊಂಡಿದ್ದು ನಂತರ ತುಳುನಾಡಿನ ವೈಭವ ಜಗತ್ತಿನಾದ್ಯಂತ ಹಬ್ಬಿದೆ.

    “ವೀರ ಕಂಬಳ” ಸಿನಿಮಾಕ್ಕೆ ಅರುಣ್ ರೈ ತೋಡಾರ್ ಬಂಡವಾಳ ಹೂಡುತ್ತಿದ್ದು ಸದ್ಯ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಬಣ್ಣ ಹಚ್ಚಿದ್ದಾರೆ. ಇದೀಗ ಧರ್ಮಸ್ಥಳದ ಬೀಡಿನಲ್ಲಿ (ಬೀಡು ಎಂದರೆ ಮನೆ) ಅವರು ಮೇಕಪ್​ ಮಾಡಿಕೊಳ್ಳುತ್ತಿರುವ ಫೋಟೊ ಫುಲ್​ ವೈರಲ್​ ಆಗಿದೆ. ತುಳುನಾಡಿನ ಪ್ರಸಿದ್ಧ ರಂಗಭೂಮಿ ಕಲಾವಿದರ ಜೊತೆಗೆ ಪ್ರಕಾಶ್ ರಾಜ್, ಆರ್ಮುಗ ರವಿಶಂಕರ್ ಮುಖ್ಯಪಾತ್ರದಲ್ಲಿ ನಟಿಸುತ್ತಿದ್ದಾರೆ.

    ಕಂಬಳದ ಕೋಣ ಓಡಿಸುವುದರಲ್ಲಿ ಪರಿಣಿತರಾಗಿರುವ ಶ್ರೀನಿವಾಸ್ ಗೌಡ ಹಾಗೂ ರಂಗಭೂಮಿ ಕಲಾವಿದ ಸ್ವರಾಜ್ ಶೆಟ್ಟಿ ಕಂಬಳದ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

     
     
     
     
     
    View this post on Instagram
     
     
     
     
     
     
     
     
     
     
     

    A post shared by Cinemagalli.com (@cinemagalli)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts