More

    ಮತ್ತೆ ಶುರು ಸ್ಯಾಂಡಲ್​ವುಡ್ ಕ್ರಿಕೆಟ್ ಹಬ್ಬ, ಡಾ.ರಾಜ್ ಕಪ್ ಸೀಸನ್-6 ಹವಾ: ಯಾವಾಗ, ಎಲ್ಲಿ? ಇಲ್ಲಿದೆ ವಿವರ..

    ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ಕ್ರಿಕೆಟ್​ ಹಬ್ಬದ ಹವಾ ಸೃಷ್ಟಿಸುವ ಡಾ.ರಾಜ್ ಕಪ್ ಸೀಸನ್ 6ಗೆ ಮುಹೂರ್ತ ನಿಗದಿ ಆಗಿದ್ದು, ಇದಕ್ಕಾಗಿ ತಾರೆಯರು ಭರ್ಜರಿ ತಯಾರಿ ಆರಂಭಿದ್ದಾರೆ. ಪವರ್ ಸ್ಟಾರ್​​ ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ಈ ರಾಜ್ ಕಪ್ ಆಯೋಜಿಸಲಾಗುತ್ತಿದೆ.

    ಈ ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ಆಯೋಜಕ ರಾಜೇಶ್ ಬ್ರಹ್ಮಾವರ ಮತ್ತು ತಂಡಗಳ ಮಾಲೀಕರು ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಮಾಹಿತಿ ನೀಡಿದರು. ನ.28ರಿಂದ ಡಿ.10ರವೆಗೆ ಡಾ.ರಾಜ್ ಕಪ್ ಸೀಸನ್-6 ನಡೆಯಲಿದ್ದು, ಸ್ಥಳ ಹಾಗೂ ತಂಡದ ಮಾಲೀಕ ಹಾಗೂ ಇನ್ನಿತರ ಸಂಗತಿಗಳನ್ನು ರಾಜೇಶ್ ಬ್ರಹ್ಮಾವರ ಹಂಚಿಕೊಂಡರು.

    ಇಷ್ಟು ವರ್ಷ ನಡೆದಿದ್ದ ರಾಜ್ ಕಪ್ ಬೇರೆ. ಈ ವರ್ಷ ಆಗುತ್ತಿರುವುದೇ ಬೇರೆ. ಇದಕ್ಕೆ ಕಾರಣ ಆನಂದ್ ಆಡಿಯೋ. ಎಂಟರ್​ಟೇನ್​ಮೆಂಟ್​ನಲ್ಲಿ ಅನುಮತಿ ಸಿಗದೇ ಇದಿದ್ದಕ್ಕೆ ರಾಜ್ ಕಪ್​​ಗೆ ತೊಂದರೆ ಆಗಬಾರದು ಎಂದು ಸ್ಪೋರ್ಟ್ ಚಾನೆಲ್ ಮಾಡಿ ಲೈವ್ ಮಾಡುತ್ತಿದ್ದಾರೆ. ಎಲ್ಲಾ ರೀತಿಯಿಂದಲೂ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ರಾಜೇಶ್ ತಿಳಿಸಿದರು.

    ಇದನ್ನೂ ಓದಿ: ಇಸ್ರೇಲ್​ನಲ್ಲಿ ಹಮಾಸ್​ ದಾಳಿ: ಗುಪ್ತಚರ ಸಂಸ್ಥೆ ಮುಖ್ಯಸ್ಥರ ವಿರುದ್ಧವೇ ಹೇಳಿಕೆ ನೀಡಿ ಕ್ಷಮೆ ಯಾಚಿಸಿದ ಪ್ರಧಾನಿ!

    ರಾಜ್ ಕಪ್ ಸಂಸ್ಥಾಪಕರಾದ ಎಲ್ಲರೂ ಬೆಂಬಲ ಕೊಡುತ್ತಿದ್ದಾರೆ. ನವೆಂಬರ್ 28 ಮತ್ತು 29 ಶ್ರೀಲಂಕಾ, ಡಿಸೆಂಬರ್ 1 ಮತ್ತು 2 ಮಲೇಷ್ಯಾ, ಡಿ. 3 ಮತ್ತು 4 ಸಿಂಗಾಪುರ, ಡಿ. 7 ಮತ್ತು 8 ಮಸ್ಕತ್ ನಲ್ಲಿ ಲೀಗ್ ಮ್ಯಾಚ್​ಗಳು ನಡೆಯಲಿವೆ. ಫೈನಲ್ ಕರ್ನಾಟಕದಲ್ಲಿ ಮಾಡುತ್ತೇವೆ. ಇನ್ನೂ ದುಬೈನಲ್ಲಿ ಲೈವ್ ಕಾಯುತ್ತಿದ್ದೇವೆ. ಅಲ್ಲಿ ಸಿಕ್ಕಿದರೆ ಮಾಡುತ್ತೇವೆ ಎಂದೂ ಹೇಳಿದರು.

    ಡಾ. ರಾಜ್ ಕಪ್ ಸೀಸನ್ 6ರಲ್ಲಿ ಒಟ್ಟು 12 ತಂಡಗಳು ಭಾಗಿಯಾಗಲಿದ್ದು, 27 ಪಂದ್ಯಗಳು ನಡೆಯಲಿವೆ. ಸಮೃದ್ದಿ ಫೈಟರ್ಸ್ ತಂಡಕ್ಕೆ ಸಮೃದ್ಧಿ ಮಂಜುನಾಥ್ ಓನರ್ ಆಗಿದ್ದು, ಡಿಎಕ್ಸ್​ ಮ್ಯಾಕ್ಸ್ ಲೈನ್ಸ್ ತಂಡಕ್ಕೆ ದಯಾನಂದ್, ರಾಮನಗರ ರಾಕರ್ಸ್ ತಂಡಕ್ಕೆ ಮಹೇಶ್ ಗೌಡ, ಇಎಲ್​ವಿ ಲಯನ್ ಕಿಂಗ್ಸ್ ತಂಡಕ್ಕೆ ಪುರುಷೋತ್ತಮ್ ಭಾಸ್ಕರ್, ಎವಿಆರ್​​ ಟಸ್ಕರ್ಸ್ ತಂಡಕ್ಕೆ ಅರವಿಂದ್ ರೆಡ್ಡಿ, ಕೆಕೆಆರ್​ ಕಿಂಗ್ಸ್ ತಂಡಕ್ಕೆ ಲಕ್ಷ್ಮೀ ಕಾಂತ್ ರೆಡ್ಡಿ, ರ್ಯಾಬಿಟ್ ರೇಸರ್ಸ್ ತಂಡಕ್ಕೆ ಅರು ಗೌಡ, ಮಯೂರ ರಾಯಲ್ಸ್ ತಂಡಕ್ಕೆ ಸೆಂಥಿಲ್, ರಾಯಲ್ ಕಿಂಗ್ಸ್ ತಂಡಕ್ಕೆ ಶ್ರೀರಾಮ್ ಮತ್ತು ಮುಖೇಶ್, ಕ್ರಿಕೆಟ್ ನಕ್ಷತ್ರ ತಂಡಕ್ಕೆ ನಕ್ಷತ್ರ ಮಂಜು, ಅಶು ಸೂರ್ಯ ಸೂಪರ್ ಸ್ಟಾರ್ ತಂಡಕ್ಕೆ ರಂಜಿತ್ ಫಯಾಜ್ ಖಾನ್ ಹಾಗೂ ರುಚಿರಾ ರೇಂಜರ್ಸ್ ತಂಡಕ್ಕೆ ರಾಮ್ ಒಡೆತನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ ಎಂದು ರಾಜೇಶ್ ಮಾಹಿತಿ ನೀಡಿದರು.

    ಮತ್ತೆ ಶುರು ಸ್ಯಾಂಡಲ್​ವುಡ್ ಕ್ರಿಕೆಟ್ ಹಬ್ಬ, ಡಾ.ರಾಜ್ ಕಪ್ ಸೀಸನ್-6 ಹವಾ: ಯಾವಾಗ, ಎಲ್ಲಿ? ಇಲ್ಲಿದೆ ವಿವರ..

    ಇದನ್ನೂ ಓದಿ: ಈ ದೇವಸ್ಥಾನದಲ್ಲಿ ಮಹಿಳೆಯರಿಗಷ್ಟೇ ಗರ್ಭಗುಡಿಗೆ ಪ್ರವೇಶ, ಪೂಜಿಸಲು ಅವಕಾಶ: ಮುಟ್ಟಾಗಿದ್ದರೂ ಇಲ್ಲಿ ಮೈಲಿಗೆಯಲ್ಲ!

    ಡಾಲಿ ಧನಂಜಯ್, ಅನಿರುದ್ಧ್​, ಡಾರ್ಲಿಂಗ್ ಕೃಷ್ಣ, ಅಭಿಷೇಕ್ ಅಂಬರೀಷ್, ನೀನಾಸಂ ಸತೀಶ್, ಲೂಸ್ ಮಾದ ಯೋಗಿ, ವಶಿಷ್ಠ ಸಿಂಹ, ಪ್ರಜ್ವಲ್, ಕೋಮಲ್, ಶ್ರೀನಗರ ಕಿಟ್ಟಿ, ರಾಜುಗೌಡ ನೇತೃತ್ವದ ತಂಡಗಳು ಪಂದ್ಯದಲ್ಲಿ ಪಾಲ್ಗೊಳ್ಳಲಿವೆ.

    ಈ ಮಹತ್ವದ ರಾಜ್ ಕಪ್​ ಟೂರ್ನಿಗಾಗಿ ಸ್ಯಾಂಡಲ್ ವುಡ್ ತಾರೆಯರು, ತಂತ್ರಜ್ಞರು, ರಾಜಕಾರಣಿಗಳು, ಮಾಧ್ಯಮದವರು ಭಾಗಿಯಾಗಲಿದ್ದಾರೆ. ಡಾ.ರಾಜ್ ಕಪ್​ಗಾಗಿ ಆನಂದ್ ಆಡಿಯೋ ಹೊಸ ಹೆಜ್ಜೆ ಇಟ್ಟಿದ್ದು, ಈ ಪಂದ್ಯಾವಳಿಗಾಗಿ ಸ್ಪೋರ್ಟ್ ಯೂಟ್ಯೂಬ್ ಪ್ರಾರಂಭ ಮಾಡ್ತಿದ್ದು, ಲೈವ್ ಮ್ಯಾಚ್​​ಗಳನ್ನು ಯೂಟ್ಯೂಬ್​​ನಲ್ಲಿ ವೀಕ್ಷಿಸಬಹುದು ಎಂದರು.

    ವಾರಕ್ಕೆ 55 ಗಂಟೆ ಅಥವಾ ಅದಕ್ಕೂ ಹೆಚ್ಚು ಕೆಲಸ ಮಾಡುವುದು ಆರೋಗ್ಯಕ್ಕೆ ಅಪಾಯಕಾರಿ: ಅಧ್ಯಯನದ ವಿವರ ಇಲ್ಲಿದೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts