ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯಾ ಅವರ ಅಂತ್ಯಸಂಸ್ಕಾರ ಪ್ರಕ್ರಿಯೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ.
ಬೆಂಗಳೂರಿನ ಅಬ್ಬಿಗೆರೆ ಫಾರ್ಮ್ಹೌಸ್ನಲ್ಲಿ ಅಂತ್ಯಸಂಸ್ಕಾರ ನಡೆಯಲಿದ್ದು, ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂತ್ಯಸಂಸ್ಕಾರದ ಮುನ್ನ ನಡೆಯುವ ವಿಧಿ-ವಿಧಾನಗಳು ಆರಂಭಗೊಂಡಿದ್ದು, ಮಾಜಿ ಸಿಎಂ ಯಡಿಯೂರಪ್ಪ ಮತ್ತು ಕುಟುಂಬಸ್ಥರು ಈಗಾಗಲೇ ಪಾದಪೂಜೆ ನೆರವೇರಿಸಿದ್ದಾರೆ.
ಒಟ್ಟು ಪ್ರಕ್ರಿಯೆ ಸುಮಾರು ಒಂದು ಗಂಟೆಯ ಕಾಲ ನಡೆಯಲಿದೆ. ವೀರರುದ್ರಮುನಿ ಶಿವಾಚಾರ್ಯ ಅವರ ನೇತೃತ್ವದಲ್ಲಿ ಅಂತ್ಯಕ್ರಿಯೆ ವಿಧಿ-ವಿಧಾನ ನಡೆಯುತ್ತದೆ ಎಂದು ನವೀನ್ ಶಾಸ್ತ್ರಿ ಎಂಬವರು ತಿಳಿಸಿದ್ದಾರೆ.
ಡಾ.ಸೌಂದರ್ಯ ಅವರ ತಂದೆ ವಿರೂಪಾಕ್ಷಪ್ಪ ಅವರು ಹುಬ್ಬಳ್ಳಿಯ ನಿವಾಸದಿಂದ ಹೊರಟಿದ್ದು, ಕೆಲವೇ ಕ್ಷಣಗಳಲ್ಲಿ ಬಂದು ತಲುಪಲಿದ್ದಾರೆ. ಅವರ ಬರುವಿಕೆಗಾಗಿ ಕುಟುಂಬ ಕಾಯುತ್ತಿದ್ದು, ಅವರು ಆಗಮಿಸುತ್ತಿದ್ದಂತೆ ಎಲ್ಲ ಪ್ರಕ್ರಿಯೆಗಳು ಚುರುಕಾಗಿ ನಡೆಯಲಿವೆ.
ಬಿಎಸ್ವೈ ಮೊಮ್ಮಗಳ ಆತ್ಮಹತ್ಯೆ: ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡ ಸೇರಿ ಹಲವರಿಂದ ಸಾಂತ್ವನ
ಬಿಎಸ್ವೈ ಮೊಮ್ಮಗಳು ಆತ್ಮಹತ್ಯೆ: ಡಾ.ಸೌಂದರ್ಯ ಸಾವಿನ ಮನೆಯ ಕದ ತಟ್ಟಿದ ಆ ಕ್ಷಣ…