More

    ಬಂಧನ ಭೀತಿಯಲ್ಲಿ ತನಗೆ ಕರೊನಾ ಇದೆಯೆಂದು ಅನುಶ್ರೀ ಡ್ರಾಮ ಮಾಡ್ತಾರಂತೆ!

    ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ ಖ್ಯಾತ ನಿರೂಪಕಿ ಅನುಶ್ರೀ ಶೀಘ್ರವೇ ಅರೆಸ್ಟ್ ಆಗ್ತಾರೆ ಎಂದು ಶುಕ್ರವಾರವಷ್ಟೇ ಸರಣಿ ಟ್ವೀಟ್​ ಮೂಲಕ ಬಾಂಬ್​ ಸಿಡಿಸಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ, ಇದೀಗ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ‘ಕರೊನಾ ಇದೆ, ಹತ್ತಿರ ಬರಬೇಡಿ. ಇದು ಇವತ್ತು ಪ್ರದರ್ಶನ ಆಗಲಿರೋ ಹೊಸ ಡ್ರಾಮ. ಪೊಲೀಸರು ಅರೆಸ್ಟ್ ಮಾಡ್ತಾರೆ ಅಂತ ಗೊತ್ತಾದ ತಕ್ಷಣಕ್ಕೆ ಶುರು ಆಗುತ್ತೆ ಈ ಕಥೆ. ನಾಟಕದ ರಾಣಿಯ ಹೊಸ ಅವತಾರ ಇಂದು’ ಎಂದು ಪರೋಕ್ಷವಾಗಿ ಸಾಮಾಜಿಕ ಜಾಲತಾಣದಲ್ಲಿ ಅನುಶ್ರೀಗೆ ಪ್ರಶಾಂತ್ ಸಂಬರಗಿ ಟಾಂಗ್​ ಕೊಟ್ಟಿದ್ದಾರೆ.

    ಇದನ್ನೂ ಓದಿರಿ ನನ್ನ ಮಗನ ಫೋಟೋ-ಹೆಸರು ಬಳಸಿದ್ರೆ ಬೆಂಕಿ ಹಚ್ಚಿಸ್ತೀನಿ: ಸೊಸೆ ವಿರುದ್ಧ ಸಿಡಿದೆದ್ದ ಡಿ.ಕೆ. ರವಿ ತಾಯಿ

    ಬಂಧನ ಭೀತಿಯಲ್ಲಿ ತನಗೆ ಕರೊನಾ ಇದೆಯೆಂದು ಅನುಶ್ರೀ ಡ್ರಾಮ ಮಾಡ್ತಾರಂತೆ!ಸಿಸಿಬಿ ವಿಚಾರಣೆ ಕುರಿತು ನಿರೂಪಕಿ ಅನುಶ್ರೀ ಮಾತನಾಡಿರುವ ವಿಡಿಯೋವನ್ನು ತನ್ನ ಫೇಸ್​ಬುಕ್ ಪೇಜ್​ನಲ್ಲಿ ನಿನ್ನೆ(ಶುಕ್ರವಾರ ಬೆಳಗ್ಗೆ)ಯಷ್ಟೇ ಅಪ್ಲೋಡ್​ ಮಾಡಿಕೊಂಡಿದ್ದರು. ಅದರಲ್ಲಿ ‘ಸಿಸಿಬಿ ವಿಚಾರಣೆ ನಡೆಸಿದ್ದ ಮಾತ್ರಕ್ಕೆ ನಾನು ಅಪರಾಧಿ ಅಥವಾ ಆರೋಪಿಯಂತಲ್ಲ. ಈ ವಿಚಾರವಾಗಿ ನನ್ನನ್ನು ಬಿಂಬಿಸಿದ ರೀತಿ ಮನಸ್ಸಿಗೆ ತುಂಬಾ ನೋವು ಉಂಟು ಮಾಡಿದೆ…’ ಎಂದು ಕಣ್ಣೀರು ಹಾಕಿದ್ದರು. ಇದರ ಬೆನ್ನಲ್ಲೇ ಸರಣಿ ಟ್ವೀಟ್​ ಮಾಡಿದ್ದ ಸಂಬರಗಿ, ”ಇಲ್ಲಿಯವರೆಗೆ ಅನುಶ್ರೀಯನ್ನು ಅರೆಸ್ಟ್ ಆಗದಂತೆ ಶುಗರ್​ ಡ್ಯಾಡಿ ತಡೆದಿದ್ದಾರೆ. ಆಕೆಯ ತಪ್ಪಿಗೆ ಕೆಲವೇ ದಿನಗಳಲ್ಲಿ ಶಿಕ್ಷೆಯಾಗುವುದು ನಿಶ್ಚಿತ. ಅನುಶ್ರೀಯ ಮತ್ತಷ್ಟು ರಹಸ್ಯ ಹೊರಬರಲಿವೆ” ಎಂದಿದ್ದರು.

    ಇಂದು ಬೆಳಗ್ಗೆ (ಶನಿವಾರ) ಮತ್ತೊಂದು ಟ್ವೀಟ್​ ಮಾಡಿರುವ ಸಂಬರಗಿ, ಅರೆಸ್ಟ್ ಆಗೋ ಭಯದಲ್ಲಿ ತನಗೆ ಕರೊನಾ ಸೋಂಕು ದೃಢಪಟ್ಟಿದೆ, ಹತ್ತಿರ ಬರಬೇಡಿ ಎಂದು ಡ್ರಾಮ ಶುರುಮಾಡುತ್ತಾಳೆ ಎಂದು ಟೀಕಿಸಿದ್ದಾರೆ.

    ಸಂಸದರ ಕಾರು, ಬಿಎಂಟಿಸಿ ಬಸ್​ಗೆ ದಂಡ ವಿಧಿಸಿದ ಪೊಲೀಸ್​!

    ‘ಅನುಶ್ರೀ ಅರೆಸ್ಟ್​ ಆಗದಂತೆ ತಡೆದಿರೋದು ಶುಗರ್​ ಡ್ಯಾಡಿ!’

    ಸಿಸಿಬಿ ನೋಟಿಸ್​ ಬರುತ್ತಿದ್ದಂತೆ ರಾಜ್ಯದ ಮೂವರು ಪ್ರಭಾವಿ ನಾಯಕರಿಗೆ ಅನುಶ್ರೀ ಕರೆ ಮಾಡಿದ್ದರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts