More

    ಮಾದಕವಸ್ತು ಮಾರಾಟಗಾರರ ಪರೇಡ್

    ಉಡುಪಿ: ಚಂದು ಮೈದಾನದಲ್ಲಿ ಬುಧವಾರ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ಪರೇಡ್ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಇನ್ನು ಮುಂದಕ್ಕೆ ಇಂತಹ ಪ್ರವೃತ್ತಿ ಮುಂದುವರಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
    ಸಮಾಜದ್ರೋಹಿ ಚಟುವಟಿಕೆಗಳಲ್ಲಿ ಭಾಗವಹಿಸದೆ ಉತ್ತಮ ರೀತಿಯಲ್ಲಿ ಜೀವನ ನಡೆಸಬೇಕು. ಮಾದಕ ದ್ರವ್ಯ ಸಾಗಾಟ, ಮಾರಾಟಗಾರರ ಮಾಹಿತಿ ನೀಡಿದವರ ವಿವರ ಗುಪ್ತವಾಗಿ ಇಡಲಾಗುವುದು ಎಂದು ತಿಳಿಸಿದರು.
    ಬೈಂದೂರು ಠಾಣಾ ವ್ಯಾಪ್ತಿಯಿಂದ ಇಬ್ಬರು, ಕುಂದಾಪುರ ಠಾಣಾ ವ್ಯಾಪ್ತಿಯಿಂದ 18, ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಿಂದ 4, ಕೋಟಾ ಠಾಣಾ ವ್ಯಾಪ್ತಿಯಿಂದ ಇಬ್ಬರು, ಉಡುಪಿ ನಗರ ಠಾಣಾ ವ್ಯಾಪ್ತಿಯಿಂದ 12, ಮಲ್ಪೆ ಠಾಣಾ ವ್ಯಾಪ್ತಿಯಿಂದ 5, ಮಣಿಪಾಲ ಠಾಣಾ ವ್ಯಾಪ್ತಿಯಿಂದ 16, ಸೆನ್ ಠಾಣಾ ವ್ಯಾಪ್ತಿಯಿಂದ ಇಬ್ಬರು, ಕಾರ್ಕಳ ನಗರ ಠಾಣಾ ವ್ಯಾಪ್ತಿಯಿಂದ ಇಬ್ಬರು, ಪಡುಬಿದ್ರಿ ಠಾಣಾ ವ್ಯಾಪ್ತಿಯಿಂದ 5, ಕಾಪು ಠಾಣಾ ವ್ಯಾಪ್ತಿಯಿಂದ 3 ಹಾಗೂ ಹಿರಿಯಡ್ಕ ಠಾಣಾ ವ್ಯಾಪ್ತಿಯಿಂದ ಓರ್ವ ಸೇರಿದಂತೆ ಒಟ್ಟು 72 ಜನ ಹಾಜರಾಗಿದ್ದರು.
    ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಪೊಲೀಸ್ ಉಪವಿಭಾಗಾಧಿಕಾರಿ ಟಿ.ಆರ್. ಜೈಶಂಕರ್, ಸಶಸ್ತ್ರ ಮೀಸಲು ಪಡೆಯ ಡಿ.ವೈ.ಎಸ್.ಪಿ. ರಾಘವೇಂದ್ರ, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts