ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಗಾಂಜಾ ಮಾರಾಟ ಜಾಲ ಸಕ್ರಿಯವಾಗಿದೆ. ನಿನ್ನೆ(ಬುಧವಾರ)ಯೂ ಒಬ್ಬ ಆರೋಪಿ ಪೊಲೀಸರ ಕೈಗೆ ಸಿಕ್ಕಿಬಿದಿದ್ದು, 5 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.
ಆ.5ರಂದು ಕೆ.ಆರ್.ಪುರ ರೈಲು ನಿಲ್ದಾಣದ ಬಳಿ ರಾಮಮೂತಿರ್ನಗರದ ನವೀನ್(26) ಎಂಬಾತ ಗಾಂಜಾ ಮಾರಾಟ ಮಾಡುತ್ತಿದ್ದ. ಈ ವೇಳೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ 5 ಕೆಜಿ ಗಾಂಜಾ ಪತ್ತೆ ಆಗಿದೆ. ವಿದ್ಯಾರ್ಥಿಗಳು ಮತ್ತು ಯುವಕರೇ ಈತನ ಟಾರ್ಗೆಟ್ ಆಗಿದ್ದು, ಅವರಿಗೆ ಗಾಂಜಾ ಮಾರಲು ಕಾಯುತ್ತಿದ್ದಾಗಿ ಪೊಲೀಸರ ಬಳಿ ಆತ ಬಾಯ್ಬಿಟ್ಟಿದ್ದಾನೆ.
ಇದನ್ನೂ ಓದಿರಿ ಜುಟ್ಟನಹಳ್ಳಿ ಮಾರಮ್ಮನ ಹುಂಡಿ ಹಣ ಕದ್ದ ಪೂಜಾರಿಯನ್ನು ಅಟ್ಟಾಡಿಸಿದ ಬಸವ, ದೇವರ ಹಣ ವಾಪಸ್!
ಕರೊನಾ ಲಾಕ್ಡೌನ್ ಸಮಯವನ್ನೇ ಬಂಡವಾಳ ಮಾಡಿಕೊಂಡಿದ್ದ ಸಮಾಜಘಾತುಕರು ಯುವಸಮೂಹಕ್ಕೆ ಅಕ್ರಮವಾಗಿ ಗಾಂಜಾ ಸರಬರಾಜು ಮಾಡುವಲ್ಲಿ ನಿರತರಾಗಿದ್ದರು. ಈ ವೇಳೆ ಡ್ರಗ್ಸ್ ಜಾಲ ಸಕ್ರಿಯವಾಗಿತ್ತು. ಪೂರ್ವ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಕಳೆದ 12 ದಿನಗಳಲ್ಲಿ 98 ಪ್ರಕರಣ ದಾಖಲಿಸಿ 98 ಆರೋಪಿಗಳನ್ನು ಬಂಧಿಸಿದ್ದಾರೆ.
ಲಾಕ್ಡೌನ್ ವೇಳೆ ಗಾಂಜಾ ಮಾರಾಟ, ಮನೆಯಲ್ಲಿರೋ ವಿದ್ಯಾರ್ಥಿಗಳೇ ಇವರ ಟಾರ್ಗೆಟ್ !