ಮಂಗಳೂರು: ಡ್ರಗ್ಸ್ ಕೇಸ್ ಸಂಬಂಧ ಸಿಸಿಬಿ ನೋಟಿಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಖ್ಯಾತ ನಿರೂಪಕಿ ಅನುಶ್ರೀ ಶನಿವಾರ ಬೆಳಗ್ಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ಸಿಸಿಬಿ ಕಚೇರಿ ಬರುವುದಾಗಿ ಹೇಳಿದ್ದ ಅನುಶ್ರೀ ಅಂದು ಬರಲೇ ಇಲ್ಲ. ಒಂದು ದಿನದ ಬಳಿಕ ಹಾಜರ್ ಆಗಿದ್ದು, ಪಣಂಬೂರು ಠಾಣೆಯಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿರಿ ಸಿಸಿಬಿ ಕಚೇರಿಗೆ ಬಂದ ಅಕುಲ್, ಕರ್ನಾಟಕದ ಜನತೆಗೆ ನಮಸ್ಕಾರಗಳು… ಎನ್ನುತ್ತ ಸ್ಫೋಟಕ ಮಾಹಿತಿ ಹೊರಹಾಕಿದ್ರು
ಡ್ರಗ್ಸ್ ಕೇಸ್ನಲ್ಲಿ ಡ್ಯಾನ್ಸರ್ ಕಂ ಬಾಲಿವುಡ್ ನಟ ಕಿಶೋರ್ ಅಮನ್ ಶೆಟ್ಟಿ ಮತ್ತು ಕೋರಿಯೋಗ್ರಫರ್ ಕಂ ಆ್ಯಂಕರ್ ತರುಣ್ನನ್ನು ಈಗಾಗಲೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟಿರುವ ಆರೋಪಿಗಳು ತಾವು ಆಯೋಜಿಸಿದ್ದ ಪಾರ್ಟಿಯಲ್ಲಿ ಅನುಶ್ರೀ ಪಾಲ್ಗೊಂಡಿದ್ದಾಗಿ ಹೇಳಿದ್ದಾರೆ. ಅಲ್ಲದೆ ಅವರಿಬ್ಬರದ್ದೂ ಡ್ರಗ್ ಟೆಸ್ಟ್ನ ವರದಿ ಪಾಸಿಟಿವ್ ಬಂದಿದೆ.
ಈ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಮಂಗಳೂರಿನಿಂದ ಬೆಂಗಳೂರಿಗೆ ಬಂದ ಸಿಸಿಬಿ ಪೊಲೀಸ್ ತಂಡ ಅನುಶ್ರೀಗೆ ಸಮನ್ಸ್ ಜಾರಿ ಮಾಡಿತ್ತು. ಶುಕ್ರವಾರ ಬೆಳಗ್ಗೆ ವಿಚಾರಣೆಗೆ ಬರುವುದಾಗಿ ನಿರೂಪಕಿ ಕೇಳಿಕೊಂಡಿದ್ದರು. ಆದರೆ, ಆ ದಿನ ತಪ್ಪಿಸಿಕೊಂಡಿದ್ದ ಅನುಶ್ರೀ ಶನಿವಾರ ಬೆಳಗ್ಗೆ ಮಂಗಳೂರು ಹೊರವಲಯದಲ್ಲಿರುವ ಪಣಂಬೂರು ಠಾಣೆಗೆ ಹಾಜರ್ ಆಗಿದ್ದಾರೆ.
‘ನಾವು ಡ್ರಗ್ಸ್ ಪಾರ್ಟಿ ಮಾಡ್ತಾ ಇದ್ವಿ, ಅದರಲ್ಲಿ ಅನುಶ್ರೀ ಕಿಕ್ಕೇರಿಸಿಕೊಳ್ತಿದ್ಲು…’