ಬೆಂಗಳೂರು: ಮದ್ಯಪಾನ ಮಾಡಿ ಕಾರು ಚಲಾಯಿಸಿದ್ದಲ್ಲದೆ ಬೈಕ್ಗೆ ಡಿಕ್ಕಿ ಹೊಡೆದು ಅಪಘಾತವನ್ನೂ ಮಾಡಿರುವ ಸಂಬಂಧ ದೂರು ದಾಖಲಾಗಿದ್ದು, ಮಡಿವಾಳ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯ ಭಾರದ್ವಾಜ್ ಎಂಬವರ ವಿರುದ್ಧ ರಮೇಶ್ ಎಂಬವರು ದೂರು ನೀಡಿದ್ದಾರೆ. ಮಡಿವಾಳದ ಅಯ್ಯಪ್ಪ ದೇವಸ್ಥಾನದ ಅಂಡರ್ ಪಾಸ್ ಬಳಿ ಈ ಅಪಘಾತ ನಡೆದಿದೆ. ಆರೋಪಿ ವಿಜಯ್ ಭಾರದ್ವಾಜ್ ಕಿಮ್ಸ್ ವೈದ್ಯ ಎಂದು ಹೇಳಲಾಗಿದೆ.
ವಿಜಯ್ ಭಾರದ್ವಾಜ್ ಅಂಡರ್ ಪಾಸ್ ಬಳಿ ಕಾರಿನಲ್ಲಿ ಹೋಗುತ್ತಿದ್ದು, ನಂತರ ರಿವರ್ಸ್ ಬಂದು ಬೈಕ್ ಡಿಕ್ಕಿ ಹೊಡೆದಿದ್ದಾರೆ ಎಂಬುದಾಗಿ ರಮೇಶ್ ದೂರು ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಜಯ್ ಮದ್ಯಪಾನ ಮಾಡಿರುವುದು ತಿಳಿದುಬಂದಿದ್ದು, ಅವರನ್ನು ಕೂಡಲೇ ಮಡಿವಾಳ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದೇನೆ.
ವಿಜಯ್ ಮದ್ಯಪಾನ ಮಾಡಿರುವುದು ಠಾಣೆಯಲ್ಲಿ ಪರಿಶೀಲನೆ ವೇಳೆ ದೃಢಪಟ್ಟಿದ್ದು, ಅವರ ವಿರುದ್ಧ ಕಾನೂನುಕ್ರಮ ಕೈಗೊಳ್ಳಬೇಕು ಎಂದು ರಮೇಶ್ ದೂರು ನೀಡಿದ್ದಾರೆ.
ವಾಟ್ಸ್ಆ್ಯಪ್ ಬಳಕೆದಾರರಿಗೆ ಸಂತಸದ ಸಂಗತಿ; ಟೆಲಿಗ್ರಾಂ ಆ್ಯಪ್ಗೆ ಪೈಪೋಟಿಯಂತೆ ಮತ್ತೊಂದು ಅಪ್ಡೇಟ್..